8:34 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನೆ

29/08/2021, 11:23

ಮಂಗಳೂರು (reporterkarnataka.com): ಉನ್ನತ ಶಿಕ್ಷಣ,  ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಇದೇ ಆ. 30ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

30ರ ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ 10.50ಕ್ಕೆ ದಕ್ಷಿಣ ಕನ್ನಡ ವಿಮಾನನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11ಗಂಟೆಗೆ ಅಲ್ಲಿಂದ ಹೊರಟು 11.45ಕ್ಕೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಆಗಮಿಸುವರು. 12 ರಿಂದ 1.30 ರವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ರಿಂದ 3 ಗಂಟೆಯವರೆಗೆ ಕನ್ನಡ ಸಾಹಿತ್ಯ ದಿಗ್ಗಜರೊಂದಿಗೆ ಸಮಾಲೋಚನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ರಿಂದ 3.45 ರವರೆಗೆ ಐಟಿ-ಬಿಟಿ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.45ಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಮುಡಿಪು ಗ್ರಾಮಕ್ಕೆ ತೆರಳುವರು.  ಸಂಜೆ 4 ಗಂಟೆಗೆ ಮುಡುಪು ಗ್ರಾಮದಲ್ಲಿ ಮಾದರಿ ಸ್ವಸಹಾಯ ಸಂಘ ಕರುನಾಡು ಗ್ರಾಮ ಪಂಚಾಯಿತಿ ಭೇಟಿ ನೀಡುವರು. ಸಂಜೆ 4.30ಕ್ಕೆ ಆರೆಸ್ಸೆಸ್ ಕಚೇರಿಗೆ ಪ್ರಯಾಣಿಸುವರು. ಸಂಜೆ 4.45 ರಿಂದ 5.15ರವರೆಗೆ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡುವರು.  ಸಂಜೆ  5.15ರಿಂದ 5.45 ರವರೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 5. 45ಕ್ಕೆ ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿ 6.55 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು