9:28 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನೆ

29/08/2021, 11:23

ಮಂಗಳೂರು (reporterkarnataka.com): ಉನ್ನತ ಶಿಕ್ಷಣ,  ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಇದೇ ಆ. 30ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

30ರ ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ 10.50ಕ್ಕೆ ದಕ್ಷಿಣ ಕನ್ನಡ ವಿಮಾನನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11ಗಂಟೆಗೆ ಅಲ್ಲಿಂದ ಹೊರಟು 11.45ಕ್ಕೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಆಗಮಿಸುವರು. 12 ರಿಂದ 1.30 ರವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ರಿಂದ 3 ಗಂಟೆಯವರೆಗೆ ಕನ್ನಡ ಸಾಹಿತ್ಯ ದಿಗ್ಗಜರೊಂದಿಗೆ ಸಮಾಲೋಚನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ರಿಂದ 3.45 ರವರೆಗೆ ಐಟಿ-ಬಿಟಿ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.45ಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಮುಡಿಪು ಗ್ರಾಮಕ್ಕೆ ತೆರಳುವರು.  ಸಂಜೆ 4 ಗಂಟೆಗೆ ಮುಡುಪು ಗ್ರಾಮದಲ್ಲಿ ಮಾದರಿ ಸ್ವಸಹಾಯ ಸಂಘ ಕರುನಾಡು ಗ್ರಾಮ ಪಂಚಾಯಿತಿ ಭೇಟಿ ನೀಡುವರು. ಸಂಜೆ 4.30ಕ್ಕೆ ಆರೆಸ್ಸೆಸ್ ಕಚೇರಿಗೆ ಪ್ರಯಾಣಿಸುವರು. ಸಂಜೆ 4.45 ರಿಂದ 5.15ರವರೆಗೆ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡುವರು.  ಸಂಜೆ  5.15ರಿಂದ 5.45 ರವರೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 5. 45ಕ್ಕೆ ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿ 6.55 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು