10:31 PM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯಿಂದ ಓಣಂ ಆಚರಣೆ

17/09/2024, 13:42

ಮಂಗಳೂರು(reporterkarnataka.com): ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರಿನ ಘಟಕದ ವತಿಯಿಂದ ಓಣಂ ಹಬ್ಬವನ್ನು ನಗರದ ಪಾಂಡೇಶ್ವರದ ಫಿಜಾ ನೆಕ್ಸಸ್ ಮಾಲ್ ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಪರಿಸರ ಸ್ನೇಹಿ ಗ್ರೀನ್ ಹೀರೋ ಆಫ್ ಇಂಡಿಯಾ ಎಂಬ ಖ್ಯಾತಿಯನ್ನು ಹೊಂದಿರುವ ಗುಜರಾತ್ ಸರ್ಕಾರದ ವಿಶೇಷ ರಾಜ್ಯ ಪ್ರಶಸ್ತಿ ವಿಜೇತರಾದ ಮೂಲತಃ ಸುಳ್ಯದವರಾದ ಡಾ.ರಾಧಾಕೃಷ್ಣನ್ ನಾಯರ್ ಗುಜರಾತ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಮಾರಂಭವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ನಾಯರ್ ಸಂಘಟನೆಯು ಸಮಾಜಕ್ಕೆ ನೀಡಿದ ಕೊಡುಗೆಗಳು ಶ್ಲಾಘಿಸಿ ಪರಿಸರ ಸಂರಕ್ಷಣೆ ಮತ್ತು ಕಾಡುಗಳನ್ನು ಬೆಳೆಸುವ ಮಹತ್ವವನ್ನು ವಿವರಿಸಿದರು.
ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರಿನ ಘಟಕದ ಅಧ್ಯಕ್ಷರ ಮುರಳಿ ಎಚ್. ಅಧ್ಯಕ್ಷತೆಯನ್ನು ವಹಿಸಿ ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯು ಹಲವು ದಶಕಗಳಿಂದ ಕರ್ನಾಟಕದಲ್ಲಿ ಜನಿಸಿದ ಅಥವಾ ಉದ್ಯೋಗ ನಿಮಿತ್ತ ಬಂದ ನಾಯರ್ ಬಾಂಧವರ ಸಂಘಟನೆಯಾಗಿದ್ದು ಸಮಾಜದ ಅಭಿವೃಧ್ದಿಗಾಗಿ ದುಡಿಯುತ್ತಾ ಸ್ಥಳಿಯ ಮತ್ತು ಮಲಯಾಳಿ ಸಂಘಟನೆಗಳೊಂದಿಗೆ ಸಾಮರಸ್ಯದಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಓಣಂ ಹಬ್ಬ ಎಲ್ಲಾ ಜಾತಿ ಬಾಂಧವರನ್ನು ಒಂದುಗೋಡಿಸುವ ರಾಷ್ಟಿçಯ ಸಾಮರಸ್ಯ ಮೂಡಿಸುವ ಹಬ್ಬವಾಗಿದೆ ಎಂದರು.
ಸಮಾರಂಭದಲ್ಲಿ ಅತಿಥಿಗಳಾಗಿ ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯ ರಾಜ್ಯಸಮಿತಿಯ ಅಧ್ಯಕ್ಷರಾದ ರಾಮಚಂದ್ರನ್ ಪಾಲೇರಿ, ಮುಖ್ಯ ಕಾರ್ಯದರ್ಶಿಯಾದ ಮುರಳಿಧರನ್, ಉಪಾಧ್ಯಕ್ಷರಾದ ಪಿ.ಕೆ.ಎಸ್. ಪಿಳ್ಯೆ, ಯೂನಿಯನ್ ಬ್ಯಾಂಕ್‌ನ ವಲಯ ಪ್ರಮುಖರಾದ ರೇಣು ಕೆ.ನಾಯರ್ ಭಾಗವಹಿಸಿ ಶುಭ ಹಾರೈಸಿದರು.
ಓಣಂ ಅಂಗವಾಗಿ 12 ರಾಜ್ಯಗಳಲ್ಲಿ 112 ಕಾಡುಗಳನ್ನು ಬೆಳೆಸಿ 20 ಲಕ್ಷಕ್ಕೂ ಹೆಚ್ಚಿನ ಮರಗಳನ್ನು ಬೆಳೆಸಿದ ಗ್ರೀನ್ ಹೀರೋ ಆಫ್ ಇಂಡಿಯಾ ಪ್ರಶಸ್ತಿ ಗಳಿಸಿದ ಡಾ.ರಾಧಾಕೃಷ್ಣನ್ ನಾಯರ್, ಅಮೋಘ ಸಾದನೆಗೈದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಚೀಫ್ ಜನರಲ್ ಮ್ಯಾನೇಜರ್ ವಿನೋದ್ ಎ.ಕೆ. ಮತ್ತು ಎಂ.ಆರ್.ಪಿ.ಎಲ್‌ನ ನಿರ್ದೇಶಕರಾದ ನಂದಕುಮಾರ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.‌ ಶಾಸಕ ವೇದವ್ಯಾಸ್ ಕಾಮತ್, ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸತೀಶ್ ಕುಂಪಲ, ಕಾಂಗ್ರೆಸ್ ಮುಖಂಡರಾದ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್. ಪೂಜಾರಿ, ಕಾರ್ಪೋರೇಟರ್ ವಿನಯರಾಜ್, ಇನ್‌ಕಮ್ ಟ್ಯಾಕ್ಸ್ ಕಮೀಷನರ್ ರಮಿತ್ ಚೆನ್ನಿತ್ತಲ, ಪ್ರಾವಿಡೆಂಟ್ ಫಂಡ್ ಕಮೀಷನರ್ ಎ.ಪಿ.ಉಣ್ಣಿಕೃಷ್ಣನ್, ಕನ್ನಡ ಮತ್ತು ತುಳು ಚಲನಚಿತ್ರದ ನಟ, ನಿರ್ದೇಶಕರಾದ ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ, ಪ್ರಕಾಶ್ ತುಮಿನಾಡ್, ಕೇರಳ ಸಮಾಜಂನ ಅಧ್ಯಕ್ಷರಾದಟಿ.ಕೆ.ರಾಜನ್, ವಿಶ್ವ ಕರ್ಮ ಸಮಾಜದ ಅಧ್ಯಕ್ಷರಾದ ಸಂದೇಶ್ ಎಮ್, ನಾರಾಯಣ ಸಾಂಸ್ಕಾರಿಕ ವೇದಿಯ ಅನಿಲ್ ದಾಮೋದರನ್, ಮಲಯಾಳಿ ಸಮೂಹದ ಅಧ್ಯಕ್ಷರಾದ ರಿಂಜು, ಕೈರಳಿ ಕಲಾವೇದಿ ಸುರತ್ಕಲ್‌ನ ಅಧ್ಯಕ್ಷರಾದ ನಿಕ್ಲಾ ಬೋಸ್, ಕರಾವಳಿ ಫ್ರೆಂಡ್ಸ್ ಸರ್ಕಲ್ ಮಂಗಳೂರಿನ ಅಧ್ಯಕ್ಷರಾದ ಕೆ.ಕೆ.ರಾಧಾಕೃಷ್ಣನ್ ಭಾಗವಹಿಸಿ ಶುಭ ಕೋರಿದರು.

ಓಣಂ ಹಬ್ಬದ ಮುಖ್ಯ ಅಂಗವಾದ ಕೇರಳೀಯ ಶೈಲಿಯ ಸಸ್ಯಹಾರಿ ಓಣಂ ಸದ್ಯವು(ಓಣಂ ಔತಣ) ಕಾರ್ಯಕ್ರಮದ ವಿಶೇಷತೆಯಾಗಿತ್ತು ಮತ್ತು ಭಾಗವಹಿಸಿದ ಎಲ್ಲರು ಅಭಿನಂದಿಸುವಂತಿತ್ತು.
ಕೇರಳೀಯ ಶೈಲಿಯ ಹಲವಾರು ಕಲಾ ಪ್ರಕಾರಗಳು ಪ್ರದರ್ಶಿಸಲ್ಪಟ್ಟವು. ಮುಖ್ಯವಾಗಿ ತಿರುವಾದಿರ ನೃತ್ಯ, ಓಪ್ಪನ ನೃತ್ಯ,
ಮಾರ್ಗಂ ನೃತ್ಯ, ಕೇರಳದ ಪಾರಂಪಾರಿಕ ಹೋರಾಟ ಕಲೆ ಕಳರಿಪಯಟ್ ಒಳಗೊಂಡಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಳ್ಳುವಂತಿತ್ತು. ಓಣಂ ದಿನಾಚರಣೆಯ ಅಂಗವಾಗಿ ಸಾರ್ವಜನಿಕವಾಗಿ ಹೂವಿನ ರಂಗೋಲಿ ಸ್ಫರ್ದೆಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಸುಮಾರು ಇಪ್ಪತ್ತು ತಂಡಗಳು ಭಾಗವಹಿಸಿದ್ದು ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಆಕಾರದ ಹೂವಿನ ರಂಗೋಲಿಯನ್ನು ಫಿಜಾ ನೆಕ್ಸಸ್ ಮಹಲಿನಲ್ಲಿ ಸಿಂಗರಿಸಿ ಪ್ರದರ್ಶಿಸಿದ್ದು ವಿಶೇಷತೆಯಾಗಿತ್ತು.
ಕಾರ್ಯಕ್ರಮವನ್ನು ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯ ಕಾರ್ಯದರ್ಶಿಯಾದ ವಿ.ಎಂ. ಸತೀಶನ್ ಸ್ವಾಗತಿಸಿದರು ಮತ್ತು ಜತೆ ಖಜಾಂಚಿಯಾದ ಸತೀಶ್ ಕುಮಾರ್ ಆರ್. ಎಲ್. ವಂದಿಸಿದರು. ಮಾತೃಭೂಮಿ ಮಲಯಾಳಿ ದೈನಿಕದ ವರದಿಗಾರರಾದ ರಿಂಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಉಪನ್ಯಾಸಕಿಯಾದ ಸಿಂಧು ಎಸ್. ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು