1:18 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: 5ನೇ ಬಾರಿ ಭಾರತಕ್ಕೆ ಗೆಲುವು; ಚೀನಾವನ್ನು ಸೋಲಿಸಿದ ಇಂಡಿಯಾ

18/09/2024, 13:17

ಮೊಕಿ(reporterkarnataka.com): ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಚೀನಾವನ್ನು 1-0 ಗೋಲಿನಿಂದ ಸೋಲಿಸಿ, 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಹರ್ಮನ್​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡ ಈ ಮೂಲಕ ದಾಖಲೆ ಬರೆದಿದೆ. ಭಾರತ ಫೈನಲ್ ಸೇರಿದಂತೆ ಸತತ 7 ಪಂದ್ಯಗಳನ್ನು ಗೆದ್ದು ಪ್ರಶಸ್ತಿ ಪಡೆದಿದೆ.

ಪಂದ್ಯದ ಒಂಬತ್ತನೇ ನಿಮಿಷದಲ್ಲಿ ಭಾರತಕ್ಕೆ ಮೊದಲ ಗೋಲು ಗಳಿಸಲು ಅವಕಾಶ ಸಿಕ್ಕಿತು, ಆದರೆ ಚೀನಾದ ರಕ್ಷಣಾತ್ಮಕ ಆಟದಿಂದ ಅದು ಸಾಧ್ಯವಾಗಲಿಲ್ಲ. 10ನೇ ನಿಮಿಷದಲ್ಲಿ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಾಗ ನಾಯಕ ಹರ್ಮನ್‌ಪ್ರೀತ್ ಗೋಲ್​ ಗಳಿಸಲು ವಿಫಲರಾದರು. ಹೀಗಾಗಿ ವಿರಾಮದ ವೇಳೆಗೆ ಸ್ಕೋರ್‌ಲೈನ್ 0-0 ಆಗಿತ್ತು. ಮೂರನೇ ಕ್ವಾರ್ಟರ್‌ನಲ್ಲಿ ಭಾರತ ಆಕ್ರಮಣಕಾರಿ ಆಟವಾಡಿತು. ಆದರೆ, ಗೋಲು ಗಳಿಸಲು ಯಶಸ್ವಿಯಾಗಲಿಲ್ಲ. ಅಂತಿಮವಾಗಿ 51ನೇ ನಿಮಿಷದಲ್ಲಿ ಜುಗ್​ರಾಜ್ ಸಿಂಗ್ ಗೋಲು ಬಾರಿಸಲು ಯಶಸ್ವಿಯಾದರು. ಟೂರ್ನಿಯ ಮೊದಲ ಪಂದ್ಯದಲ್ಲಿ ಇದೇ ಚೀನಾವನ್ನು 3-0 ಗೋಲುಗಳಿಂದ ಭಾರತ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು