8:55 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: 300 ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

18/09/2024, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ತೀರ್ಥಹಳ್ಳಿಯಲ್ಲಿ ಇಂದು 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸ ಆಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಥವಾ ಅಧಿಕಾರಿಗಳಿಂದ ತೊಂದರೆ ಆದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು