11:07 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: 300 ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

18/09/2024, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ತೀರ್ಥಹಳ್ಳಿಯಲ್ಲಿ ಇಂದು 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸ ಆಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಥವಾ ಅಧಿಕಾರಿಗಳಿಂದ ತೊಂದರೆ ಆದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು