10:29 PM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: 300 ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

18/09/2024, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ತೀರ್ಥಹಳ್ಳಿಯಲ್ಲಿ ಇಂದು 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸ ಆಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಥವಾ ಅಧಿಕಾರಿಗಳಿಂದ ತೊಂದರೆ ಆದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು