3:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ: 1 ಕೋಟಿ ರೂ.ವೆಚ್ಚದ ನೂತನ ಕಟ್ಟಡಕ್ಕೆ ಶಂಕು ಸ್ಥಾಪನೆ

18/09/2024, 23:05

ಮಂಗಳೂರು(reporterkarnataka.com): ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂದರ್ಭದಲ್ಲಿ ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ. ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭ ಬುಧವಾರ ನಡೆಯಿತು.
ಮಂಗಳೂರು ನಗರ ಉತ್ತರದ ಶಾಸಕ ಡಾ.ಭರತ್‌ ಶೆಟ್ಟಿ
ವೈ. ಹಾಗೂ ಕಟ್ಟಡದ ದಾನಿ, ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್‌ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಇಲ್ಲಿನ ಶಾಲೆ ನೂರು ವರ್ಷಗಳನ್ನು ಪೂರೈಸುತ್ತಿದ್ದು ಸಾವಿರ ಸಾವಿರ ಮಂದಿ ವಿದ್ಯಾರ್ಥಿಗಳು ಕಲಿತು ಇಂದು ಸಮಾಜದ ಉನ್ನತ ಸ್ತರದಲ್ಲಿದ್ದಾರೆ. ಇದೀಗ ಶಾಲೆಯನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೇಶವ ಅಮೀನ್‌ ಉತ್ತಮ ಧ್ಯೆಯದೊಂದಿಗೆ ಮುಂದಾಗಿದ್ದು ಶ್ಲಾಘನೀಯ. ಇತರ ಮೂಲಸೌಕರ್ಯ ಸೇರಿದಂತೆ ಸುಸಜ್ಜಿತ ಶಾಲೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳೂರು ಉತ್ತರ ವಲಯ ಇದರ ಜೇಮ್್ಸ ಕುಟಿನೋ
ಮನಪಾ ಸದಸ್ಯರಾದ ಸುಮಂಗಲಾ ರಾವ್, ಕಾವೂರು ಸಿಆ‌ರ್ ಪಿ ದೀಪಿಕಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕಾರ್ಯದರ್ಶಿಗಳಾದ ವಿಕೇಶ್ ಮತ್ತು ಲಾವಣ್ಯ ಶೆಟ್ಟಿ, ನ್ಯಾಯವಾದಿ ಗುರುಪ್ರಸಾದ್ , ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಾವತಿ ಸುರೇಂದ್ರನಾಥ ಶೆಟ್ಟಿ,ಭುಜಂಗ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷಲಕ್ಷ್ಮಣ ಛಲವಾದಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ನಿತೇಶ್ ಕಾವೂರು, ಅಜಿತ್, ಶಿತೇಶ್ ಕೊಂಡೆ, ಸಮಾಜ ಸೇವಕರಾದ ‌ ಹಸನಬ್ಬ, ಪೆಲ್ಲಿರೆಗೋ.ಅಶ್ವಿನಿ, ಗೋಕುಲ್ ದಾಸ್ ಪ್ರಭು, ಅರ್ಚನಾ, ಕೃಷ್ಣಪ್ಪ ಸಾಲ್ಯಾನ್, ಕುಸುಮಕರ್, ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಸ್‌ ಡಿಎಂಸಿಯ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ಚೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು