7:36 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

18/09/2024, 23:07

ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ ಜೊತೆಯಲ್ಲಿ ಜಂಟಿಯಾಗಿ ಪಡೆಯಲಿದ್ದಾರೆ ಎಂದು ಹಿರಿಯ ಪತ್ರಕರ್ತರು, ಬಹು ಭಾಷಾ ಸಾಹಿತಿ ಹಾಗೂ ಅಖಿಲ ಭಾರತ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ತಿಳಿಸಿದ್ದಾರೆ.
ಇದೇ ಸಪ್ಟೆಂಬರ್ 22ರಂದು ರ ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸನ್ಮಾನ ನಡೆಯಲಿದೆ.
ಕೇರಳ, ಕರ್ನಾಟಕ, ಗೋವಾ, ಆಂದ್ರ, ಮಹಾರಾಷ್ಟ್ರ, ದೆಹಲಿ ಪ್ರದೇಶದ ಕೊಂಕಣಿ ಮಾತೃಭಾಷೆ ಚಾರೊಳಿ ಸಾಹಿತಿಗಳು, ಚಿಂತಕರು, ವಿಷಯಗಳ ಮಂಡನೆ ಹಾಗೂ ಕವಿವಾಣಿ ಸಾಧರ ಪಡಿಸುವರು.
ಇದರ ಹಿಂದೆ ಮೊದಲಿಗೆ 2022 ರಲ್ಲಿ ಗೋವಾದ ಕಲಾ ಶಿಕ್ಷಕರು ಹಾಗೂ ಕವಿ, ಸಾಹಿತಿ ಗೌರೀಶ ವರ್ಣೇಕರ್ ಹಾಗೂ ಕೇರಳದ ಹಿರಿಯ ಕವಿ ಆರ್. ಎಸ್. ಭಾಸ್ಕರ್ ಹಾಗೂ 2023ರ ದ್ವಿತೀಯ ಸಮ್ಮೇಳನದಲ್ಲಿ ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ರಾಜಯ್ ಪವಾರ್ ಸನ್ಮಾನಿತರಾಗಿದ್ದರು.
ಮೊದಲ ಸಮ್ಮೇಳನ ಮಂಗಳೂರು, ದ್ವಿತೀಯ ಮತ್ತು ಇದು ತೃತೀಯ ಗೋವಾದಲ್ಲಿ ರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಲಿವೆ.
ಸ್ಥಳೀಯ ಗೋವಾದ ಕವಿಕೂಟ ಉಗ್ತೆಂ ಮೊಳಬ್ ಈ ಬಾರಿಯ ಸ್ಥಳೀಯ ಸಂಯೋಜಕ ಸಂಸ್ಥೆಯಾಗಿ ಸಮ್ಮೇಳನದ ಆಯೋಜನೆ ಮಾಡಲಿದೆ.
ಕಳೆದ 2023 ರ ಗೋವಾ ರಾಜ್ಯದ ‌ಕೊಂಕಣಿ ಲೇಖಕರ ಸಂಘ ಸಮ್ಮೇಳನ ಸಂಯೋಜನೆ ಮಾಡಿದ್ದರು.
ಆಖಿಲ ಭಾರತ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಆಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಬಾರಿ ಗೋವಾದ ವಿವೇಕ ಪಿಸೂಲೆಕರ್, ಗೌರೀಶ ವರ್ಣೇಕರ್, ಕಾರವಾರದ ಸಂದೇಶ ಬಾಂದೇಕರ್,ಈ ರಾಷ್ಟ್ರೀಯ ಸಮ್ಮೇಳನದ ಸಂಯೋಜನೆ ‌ಮಾಡಲು ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಸಂಚಾಲಕರಾಗಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು