1:30 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

18/09/2024, 23:07

ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ ಜೊತೆಯಲ್ಲಿ ಜಂಟಿಯಾಗಿ ಪಡೆಯಲಿದ್ದಾರೆ ಎಂದು ಹಿರಿಯ ಪತ್ರಕರ್ತರು, ಬಹು ಭಾಷಾ ಸಾಹಿತಿ ಹಾಗೂ ಅಖಿಲ ಭಾರತ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ತಿಳಿಸಿದ್ದಾರೆ.
ಇದೇ ಸಪ್ಟೆಂಬರ್ 22ರಂದು ರ ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸನ್ಮಾನ ನಡೆಯಲಿದೆ.
ಕೇರಳ, ಕರ್ನಾಟಕ, ಗೋವಾ, ಆಂದ್ರ, ಮಹಾರಾಷ್ಟ್ರ, ದೆಹಲಿ ಪ್ರದೇಶದ ಕೊಂಕಣಿ ಮಾತೃಭಾಷೆ ಚಾರೊಳಿ ಸಾಹಿತಿಗಳು, ಚಿಂತಕರು, ವಿಷಯಗಳ ಮಂಡನೆ ಹಾಗೂ ಕವಿವಾಣಿ ಸಾಧರ ಪಡಿಸುವರು.
ಇದರ ಹಿಂದೆ ಮೊದಲಿಗೆ 2022 ರಲ್ಲಿ ಗೋವಾದ ಕಲಾ ಶಿಕ್ಷಕರು ಹಾಗೂ ಕವಿ, ಸಾಹಿತಿ ಗೌರೀಶ ವರ್ಣೇಕರ್ ಹಾಗೂ ಕೇರಳದ ಹಿರಿಯ ಕವಿ ಆರ್. ಎಸ್. ಭಾಸ್ಕರ್ ಹಾಗೂ 2023ರ ದ್ವಿತೀಯ ಸಮ್ಮೇಳನದಲ್ಲಿ ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ರಾಜಯ್ ಪವಾರ್ ಸನ್ಮಾನಿತರಾಗಿದ್ದರು.
ಮೊದಲ ಸಮ್ಮೇಳನ ಮಂಗಳೂರು, ದ್ವಿತೀಯ ಮತ್ತು ಇದು ತೃತೀಯ ಗೋವಾದಲ್ಲಿ ರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಲಿವೆ.
ಸ್ಥಳೀಯ ಗೋವಾದ ಕವಿಕೂಟ ಉಗ್ತೆಂ ಮೊಳಬ್ ಈ ಬಾರಿಯ ಸ್ಥಳೀಯ ಸಂಯೋಜಕ ಸಂಸ್ಥೆಯಾಗಿ ಸಮ್ಮೇಳನದ ಆಯೋಜನೆ ಮಾಡಲಿದೆ.
ಕಳೆದ 2023 ರ ಗೋವಾ ರಾಜ್ಯದ ‌ಕೊಂಕಣಿ ಲೇಖಕರ ಸಂಘ ಸಮ್ಮೇಳನ ಸಂಯೋಜನೆ ಮಾಡಿದ್ದರು.
ಆಖಿಲ ಭಾರತ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಆಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಬಾರಿ ಗೋವಾದ ವಿವೇಕ ಪಿಸೂಲೆಕರ್, ಗೌರೀಶ ವರ್ಣೇಕರ್, ಕಾರವಾರದ ಸಂದೇಶ ಬಾಂದೇಕರ್,ಈ ರಾಷ್ಟ್ರೀಯ ಸಮ್ಮೇಳನದ ಸಂಯೋಜನೆ ‌ಮಾಡಲು ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಸಂಚಾಲಕರಾಗಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು