10:06 PM Tuesday1 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

18/09/2024, 23:07

ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ ಜೊತೆಯಲ್ಲಿ ಜಂಟಿಯಾಗಿ ಪಡೆಯಲಿದ್ದಾರೆ ಎಂದು ಹಿರಿಯ ಪತ್ರಕರ್ತರು, ಬಹು ಭಾಷಾ ಸಾಹಿತಿ ಹಾಗೂ ಅಖಿಲ ಭಾರತ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ತಿಳಿಸಿದ್ದಾರೆ.
ಇದೇ ಸಪ್ಟೆಂಬರ್ 22ರಂದು ರ ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸನ್ಮಾನ ನಡೆಯಲಿದೆ.
ಕೇರಳ, ಕರ್ನಾಟಕ, ಗೋವಾ, ಆಂದ್ರ, ಮಹಾರಾಷ್ಟ್ರ, ದೆಹಲಿ ಪ್ರದೇಶದ ಕೊಂಕಣಿ ಮಾತೃಭಾಷೆ ಚಾರೊಳಿ ಸಾಹಿತಿಗಳು, ಚಿಂತಕರು, ವಿಷಯಗಳ ಮಂಡನೆ ಹಾಗೂ ಕವಿವಾಣಿ ಸಾಧರ ಪಡಿಸುವರು.
ಇದರ ಹಿಂದೆ ಮೊದಲಿಗೆ 2022 ರಲ್ಲಿ ಗೋವಾದ ಕಲಾ ಶಿಕ್ಷಕರು ಹಾಗೂ ಕವಿ, ಸಾಹಿತಿ ಗೌರೀಶ ವರ್ಣೇಕರ್ ಹಾಗೂ ಕೇರಳದ ಹಿರಿಯ ಕವಿ ಆರ್. ಎಸ್. ಭಾಸ್ಕರ್ ಹಾಗೂ 2023ರ ದ್ವಿತೀಯ ಸಮ್ಮೇಳನದಲ್ಲಿ ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ರಾಜಯ್ ಪವಾರ್ ಸನ್ಮಾನಿತರಾಗಿದ್ದರು.
ಮೊದಲ ಸಮ್ಮೇಳನ ಮಂಗಳೂರು, ದ್ವಿತೀಯ ಮತ್ತು ಇದು ತೃತೀಯ ಗೋವಾದಲ್ಲಿ ರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಲಿವೆ.
ಸ್ಥಳೀಯ ಗೋವಾದ ಕವಿಕೂಟ ಉಗ್ತೆಂ ಮೊಳಬ್ ಈ ಬಾರಿಯ ಸ್ಥಳೀಯ ಸಂಯೋಜಕ ಸಂಸ್ಥೆಯಾಗಿ ಸಮ್ಮೇಳನದ ಆಯೋಜನೆ ಮಾಡಲಿದೆ.
ಕಳೆದ 2023 ರ ಗೋವಾ ರಾಜ್ಯದ ‌ಕೊಂಕಣಿ ಲೇಖಕರ ಸಂಘ ಸಮ್ಮೇಳನ ಸಂಯೋಜನೆ ಮಾಡಿದ್ದರು.
ಆಖಿಲ ಭಾರತ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಆಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಬಾರಿ ಗೋವಾದ ವಿವೇಕ ಪಿಸೂಲೆಕರ್, ಗೌರೀಶ ವರ್ಣೇಕರ್, ಕಾರವಾರದ ಸಂದೇಶ ಬಾಂದೇಕರ್,ಈ ರಾಷ್ಟ್ರೀಯ ಸಮ್ಮೇಳನದ ಸಂಯೋಜನೆ ‌ಮಾಡಲು ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಸಂಚಾಲಕರಾಗಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು