8:30 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು