12:58 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು