4:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು