7:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಮೇಯರ್ ಬಿಜೆಪಿಯ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ: ಸಂಸದ, ಶಾಸಕರ ಅಭಿನಂದನೆ

19/09/2024, 21:35

ಮಂಗಳೂರು(reporterkarnataka.com): ಮಂಗಳೂರಿನ‌ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮನೋಜ್ ಕುಮಾರ್ 25ನೇ ಅವಧಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.


ನೂತನ ಮೇಯರ್ ಹಾಗೂ ಉಪ ಮೇಯರ್ ಮುಂದಿನ 6 ತಿಂಗಳುಗಳ ಕಾಲ ಆಡಳಿತ ನಡೆಸಲಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ಮೀಸಲಿಡಲಾಗಿತ್ತು.
ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್ ಮತ್ತು ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂತೆಗೆದುಕೊಳ್ಳಲು 5 ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂತೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿ ಅವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14 ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀ ಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿ ಸಮಿತಿಗೆ ತಲಾ 7 ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61 ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ರೀಜನಲ್ ಕಮಿಷನರ್ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು