2:59 AM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಮೇಯರ್ ಬಿಜೆಪಿಯ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ: ಸಂಸದ, ಶಾಸಕರ ಅಭಿನಂದನೆ

19/09/2024, 21:35

ಮಂಗಳೂರು(reporterkarnataka.com): ಮಂಗಳೂರಿನ‌ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮನೋಜ್ ಕುಮಾರ್ 25ನೇ ಅವಧಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.


ನೂತನ ಮೇಯರ್ ಹಾಗೂ ಉಪ ಮೇಯರ್ ಮುಂದಿನ 6 ತಿಂಗಳುಗಳ ಕಾಲ ಆಡಳಿತ ನಡೆಸಲಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ಮೀಸಲಿಡಲಾಗಿತ್ತು.
ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್ ಮತ್ತು ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂತೆಗೆದುಕೊಳ್ಳಲು 5 ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂತೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿ ಅವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14 ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀ ಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿ ಸಮಿತಿಗೆ ತಲಾ 7 ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61 ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ರೀಜನಲ್ ಕಮಿಷನರ್ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು