10:19 PM Sunday22 - June 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

19/09/2024, 22:03

ಮಂಗಳೂರು(reporterkarnataka.com): ನೂತನ ಮೇಯರ್ – ಉಪ ಮೇಯರ್ ಆಯ್ಕೆ ಬಳಿಕ ಅಭಿನಂದನಾ ಸಭೆ ನಡೆಯುತ್ತಿದ್ದಾಗಲೇ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಇಡೀ ಸಭೆ ಸಾಕ್ಷಿಯಾಯಿತು.


ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಅವರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ ಬಳಿಕ ನಿರ್ಗಮನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಭಿನಂದನಾ ಭಾಷಣ ಮಾಡಿದರು.
ಈ ವೇಳೆ ಅವರು ಭಾಷಣ ಮಾಡುತ್ತಿದ್ದಾಗಲೇ ಪ್ರತಿಪಕ್ಷ ಸದಸ್ಯರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಲು ತೆರಳಿದರು. ಇದರಿಂದ ಸಿಡಿಮಿಡಿಗೊಂಡ ಸುಧೀರ್ ಶೆಟ್ಟಿ ಕಣ್ಣೂರು, ‘ಅರ್ಧದಲ್ಲೇ ಯಾಕೆ ಅಭಿನಂದನೆ ಸಲ್ಲಿಸುತ್ತಿದ್ದೀರಿ‌. ಎಸ್‌.ಸಿ. ಸಮುದಾಯದ ಸದಸ್ಯರೋರ್ವರು ಮೇಯರ್ ಆಗಿರುವಾಗ ನೀವು ಹೀಗೆ ಮಾಡುವುದು ಸರಿಯಲ್ಲ’ ಎಂದು ಆಕ್ಷೇಪಣೆ ಎತ್ತಿದ್ದಾರೆ.
ಆಗ ಪ್ರತಿಪಕ್ಷ ಸದಸ್ಯರು ಮಾತನಾಡಿ, ತಾವು ರಾಜ್ಯ ಸರಕಾರವನ್ನು ದೂಷಿಸುವುದು ಸರಿಯಲ್ಲ. ವಿನಾ ಕಾರಣ ಮೇಯರ್ ಅಭಿನಂದನಾ ಸಭೆಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಈಗಾಗಲೇ ಮಾತನಾಡಿರುವ ಎಂಪಿ, ಎಂಎಲ್ಎಗಳು ರಾಜಕೀಯ ಮಾತನಾಡಿಲ್ಲ‌. ತಾವೇಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಈ ನಡುವೆ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಈ ಹಿಂದೆ ಮೇಯರ್ ಅಭ್ಯರ್ಥಿ ಮೀಸಲಾತಿ ನಾಲ್ಕು ಜನರಲ್ ಮೆರಿಟ್‌ಗೆ ಮಾತ್ರವಿತ್ತು. ಆದರೆ ಎಸ್ ಸಿ
ಮೀಸಲಾತಿ ಬರಬೇಕಾದರೆ ನಮ್ಮ ನಿಯೋಗ ನಗರಾಭಿವೃದ್ಧಿ ಸಚಿವರಲ್ಲಿಗೆ ಹೋಗಿ ಅವರ ಮನವೊಲಿಕೆ ಮಾಡಿದ್ದೀರಿ. ಆದ್ದರಿಂದ ಎಸ್ ಸಿ ಮೀಸಲಾತಿ ಬಂದು, ಎಸ್ಸಿ ಸಮುದಾಯದ ಸದಸ್ಯರೊಬ್ಬರು ಇದೀಗ ಮೇಯರ್ ಆಗಿದ್ದಾರೆ. ಆದ್ದರಿಂದ ಎಸ್ ಸಿ ಮೀಸಲಾತಿ ಬರಬೇಕಾದರೆ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಹೇಳಿದರು.
ಬಳಿಕ ಈ ವಾಕ್ಸಮರ ತಣ್ಣಗಾಗಿ, ಅಭಿನಂದನಾ ಸಭೆ ಮತ್ತೆ ಮುಂದುವರಿಯಿತು.

ಇತ್ತೀಚಿನ ಸುದ್ದಿ

ಜಾಹೀರಾತು