8:41 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

19/09/2024, 22:03

ಮಂಗಳೂರು(reporterkarnataka.com): ನೂತನ ಮೇಯರ್ – ಉಪ ಮೇಯರ್ ಆಯ್ಕೆ ಬಳಿಕ ಅಭಿನಂದನಾ ಸಭೆ ನಡೆಯುತ್ತಿದ್ದಾಗಲೇ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಇಡೀ ಸಭೆ ಸಾಕ್ಷಿಯಾಯಿತು.


ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಅವರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ ಬಳಿಕ ನಿರ್ಗಮನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಭಿನಂದನಾ ಭಾಷಣ ಮಾಡಿದರು.
ಈ ವೇಳೆ ಅವರು ಭಾಷಣ ಮಾಡುತ್ತಿದ್ದಾಗಲೇ ಪ್ರತಿಪಕ್ಷ ಸದಸ್ಯರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಲು ತೆರಳಿದರು. ಇದರಿಂದ ಸಿಡಿಮಿಡಿಗೊಂಡ ಸುಧೀರ್ ಶೆಟ್ಟಿ ಕಣ್ಣೂರು, ‘ಅರ್ಧದಲ್ಲೇ ಯಾಕೆ ಅಭಿನಂದನೆ ಸಲ್ಲಿಸುತ್ತಿದ್ದೀರಿ‌. ಎಸ್‌.ಸಿ. ಸಮುದಾಯದ ಸದಸ್ಯರೋರ್ವರು ಮೇಯರ್ ಆಗಿರುವಾಗ ನೀವು ಹೀಗೆ ಮಾಡುವುದು ಸರಿಯಲ್ಲ’ ಎಂದು ಆಕ್ಷೇಪಣೆ ಎತ್ತಿದ್ದಾರೆ.
ಆಗ ಪ್ರತಿಪಕ್ಷ ಸದಸ್ಯರು ಮಾತನಾಡಿ, ತಾವು ರಾಜ್ಯ ಸರಕಾರವನ್ನು ದೂಷಿಸುವುದು ಸರಿಯಲ್ಲ. ವಿನಾ ಕಾರಣ ಮೇಯರ್ ಅಭಿನಂದನಾ ಸಭೆಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಈಗಾಗಲೇ ಮಾತನಾಡಿರುವ ಎಂಪಿ, ಎಂಎಲ್ಎಗಳು ರಾಜಕೀಯ ಮಾತನಾಡಿಲ್ಲ‌. ತಾವೇಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಈ ನಡುವೆ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಈ ಹಿಂದೆ ಮೇಯರ್ ಅಭ್ಯರ್ಥಿ ಮೀಸಲಾತಿ ನಾಲ್ಕು ಜನರಲ್ ಮೆರಿಟ್‌ಗೆ ಮಾತ್ರವಿತ್ತು. ಆದರೆ ಎಸ್ ಸಿ
ಮೀಸಲಾತಿ ಬರಬೇಕಾದರೆ ನಮ್ಮ ನಿಯೋಗ ನಗರಾಭಿವೃದ್ಧಿ ಸಚಿವರಲ್ಲಿಗೆ ಹೋಗಿ ಅವರ ಮನವೊಲಿಕೆ ಮಾಡಿದ್ದೀರಿ. ಆದ್ದರಿಂದ ಎಸ್ ಸಿ ಮೀಸಲಾತಿ ಬಂದು, ಎಸ್ಸಿ ಸಮುದಾಯದ ಸದಸ್ಯರೊಬ್ಬರು ಇದೀಗ ಮೇಯರ್ ಆಗಿದ್ದಾರೆ. ಆದ್ದರಿಂದ ಎಸ್ ಸಿ ಮೀಸಲಾತಿ ಬರಬೇಕಾದರೆ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಹೇಳಿದರು.
ಬಳಿಕ ಈ ವಾಕ್ಸಮರ ತಣ್ಣಗಾಗಿ, ಅಭಿನಂದನಾ ಸಭೆ ಮತ್ತೆ ಮುಂದುವರಿಯಿತು.

ಇತ್ತೀಚಿನ ಸುದ್ದಿ

ಜಾಹೀರಾತು