12:15 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

19/09/2024, 22:03

ಮಂಗಳೂರು(reporterkarnataka.com): ನೂತನ ಮೇಯರ್ – ಉಪ ಮೇಯರ್ ಆಯ್ಕೆ ಬಳಿಕ ಅಭಿನಂದನಾ ಸಭೆ ನಡೆಯುತ್ತಿದ್ದಾಗಲೇ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಇಡೀ ಸಭೆ ಸಾಕ್ಷಿಯಾಯಿತು.


ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಅವರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ ಬಳಿಕ ನಿರ್ಗಮನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಭಿನಂದನಾ ಭಾಷಣ ಮಾಡಿದರು.
ಈ ವೇಳೆ ಅವರು ಭಾಷಣ ಮಾಡುತ್ತಿದ್ದಾಗಲೇ ಪ್ರತಿಪಕ್ಷ ಸದಸ್ಯರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಲು ತೆರಳಿದರು. ಇದರಿಂದ ಸಿಡಿಮಿಡಿಗೊಂಡ ಸುಧೀರ್ ಶೆಟ್ಟಿ ಕಣ್ಣೂರು, ‘ಅರ್ಧದಲ್ಲೇ ಯಾಕೆ ಅಭಿನಂದನೆ ಸಲ್ಲಿಸುತ್ತಿದ್ದೀರಿ‌. ಎಸ್‌.ಸಿ. ಸಮುದಾಯದ ಸದಸ್ಯರೋರ್ವರು ಮೇಯರ್ ಆಗಿರುವಾಗ ನೀವು ಹೀಗೆ ಮಾಡುವುದು ಸರಿಯಲ್ಲ’ ಎಂದು ಆಕ್ಷೇಪಣೆ ಎತ್ತಿದ್ದಾರೆ.
ಆಗ ಪ್ರತಿಪಕ್ಷ ಸದಸ್ಯರು ಮಾತನಾಡಿ, ತಾವು ರಾಜ್ಯ ಸರಕಾರವನ್ನು ದೂಷಿಸುವುದು ಸರಿಯಲ್ಲ. ವಿನಾ ಕಾರಣ ಮೇಯರ್ ಅಭಿನಂದನಾ ಸಭೆಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಈಗಾಗಲೇ ಮಾತನಾಡಿರುವ ಎಂಪಿ, ಎಂಎಲ್ಎಗಳು ರಾಜಕೀಯ ಮಾತನಾಡಿಲ್ಲ‌. ತಾವೇಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಈ ನಡುವೆ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಈ ಹಿಂದೆ ಮೇಯರ್ ಅಭ್ಯರ್ಥಿ ಮೀಸಲಾತಿ ನಾಲ್ಕು ಜನರಲ್ ಮೆರಿಟ್‌ಗೆ ಮಾತ್ರವಿತ್ತು. ಆದರೆ ಎಸ್ ಸಿ
ಮೀಸಲಾತಿ ಬರಬೇಕಾದರೆ ನಮ್ಮ ನಿಯೋಗ ನಗರಾಭಿವೃದ್ಧಿ ಸಚಿವರಲ್ಲಿಗೆ ಹೋಗಿ ಅವರ ಮನವೊಲಿಕೆ ಮಾಡಿದ್ದೀರಿ. ಆದ್ದರಿಂದ ಎಸ್ ಸಿ ಮೀಸಲಾತಿ ಬಂದು, ಎಸ್ಸಿ ಸಮುದಾಯದ ಸದಸ್ಯರೊಬ್ಬರು ಇದೀಗ ಮೇಯರ್ ಆಗಿದ್ದಾರೆ. ಆದ್ದರಿಂದ ಎಸ್ ಸಿ ಮೀಸಲಾತಿ ಬರಬೇಕಾದರೆ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಹೇಳಿದರು.
ಬಳಿಕ ಈ ವಾಕ್ಸಮರ ತಣ್ಣಗಾಗಿ, ಅಭಿನಂದನಾ ಸಭೆ ಮತ್ತೆ ಮುಂದುವರಿಯಿತು.

ಇತ್ತೀಚಿನ ಸುದ್ದಿ

ಜಾಹೀರಾತು