9:02 AM Friday12 - September 2025
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ…

ಇತ್ತೀಚಿನ ಸುದ್ದಿ

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯ ಬಾಲಕಿಯ ಅನುಮಾನಾಸ್ಪದ ಸಾವು: ಕಿವಿಯೋಲೆ, ಕಾಲ್ಗೆಜ್ಜೆ ನಾಪತ್ತೆ; ಶ್ವಾನ ದಳ, ಬೆರಳಚ್ಚು ತಜ್ಞರ ಪರಿಶೀಲನೆ

19/09/2024, 22:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ‌ ಸ್ಟೇಷನ್ ಬಳಿ ನಡೆದಿದೆ.
ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯಗಳಾಗಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ. ತಂದೆ-ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ‌ ನಡೆದಿದೆ. ಮಂಜುನಾಥ್ ಹಾಗೂ ಮಂಗಳಾ ದಂಪತಿಯ ಪುತ್ರಿ ಈ 5 ವರ್ಷದ ಬಾಲಕಿ. ಮಗುವಿಗೆ ಜ್ವರ ಇತ್ತು ಎಂದು ದಂಪತಿ ಮನೆಯಲ್ಲೇ ಬಿಟ್ಟು ಹೋಗಿದ್ದರು.ದಂಪತಿ ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.ದಂಪತಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ
ಬಾಲಕಿ ಶವವಾಗಿ ಬಿದ್ದಿದ್ದಳು.


ಬಾಲಕಿಯ ಸಾವಿನ ಸುತ್ತ ಹಲವು ಅನುಮಾನ ಮೂಡಿಬಂದಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು