6:06 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯ ಬಾಲಕಿಯ ಅನುಮಾನಾಸ್ಪದ ಸಾವು: ಕಿವಿಯೋಲೆ, ಕಾಲ್ಗೆಜ್ಜೆ ನಾಪತ್ತೆ; ಶ್ವಾನ ದಳ, ಬೆರಳಚ್ಚು ತಜ್ಞರ ಪರಿಶೀಲನೆ

19/09/2024, 22:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ‌ ಸ್ಟೇಷನ್ ಬಳಿ ನಡೆದಿದೆ.
ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯಗಳಾಗಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ. ತಂದೆ-ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ‌ ನಡೆದಿದೆ. ಮಂಜುನಾಥ್ ಹಾಗೂ ಮಂಗಳಾ ದಂಪತಿಯ ಪುತ್ರಿ ಈ 5 ವರ್ಷದ ಬಾಲಕಿ. ಮಗುವಿಗೆ ಜ್ವರ ಇತ್ತು ಎಂದು ದಂಪತಿ ಮನೆಯಲ್ಲೇ ಬಿಟ್ಟು ಹೋಗಿದ್ದರು.ದಂಪತಿ ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.ದಂಪತಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ
ಬಾಲಕಿ ಶವವಾಗಿ ಬಿದ್ದಿದ್ದಳು.


ಬಾಲಕಿಯ ಸಾವಿನ ಸುತ್ತ ಹಲವು ಅನುಮಾನ ಮೂಡಿಬಂದಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು