7:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯ ಬಾಲಕಿಯ ಅನುಮಾನಾಸ್ಪದ ಸಾವು: ಕಿವಿಯೋಲೆ, ಕಾಲ್ಗೆಜ್ಜೆ ನಾಪತ್ತೆ; ಶ್ವಾನ ದಳ, ಬೆರಳಚ್ಚು ತಜ್ಞರ ಪರಿಶೀಲನೆ

19/09/2024, 22:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ‌ ಸ್ಟೇಷನ್ ಬಳಿ ನಡೆದಿದೆ.
ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯಗಳಾಗಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ. ತಂದೆ-ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ‌ ನಡೆದಿದೆ. ಮಂಜುನಾಥ್ ಹಾಗೂ ಮಂಗಳಾ ದಂಪತಿಯ ಪುತ್ರಿ ಈ 5 ವರ್ಷದ ಬಾಲಕಿ. ಮಗುವಿಗೆ ಜ್ವರ ಇತ್ತು ಎಂದು ದಂಪತಿ ಮನೆಯಲ್ಲೇ ಬಿಟ್ಟು ಹೋಗಿದ್ದರು.ದಂಪತಿ ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.ದಂಪತಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ
ಬಾಲಕಿ ಶವವಾಗಿ ಬಿದ್ದಿದ್ದಳು.


ಬಾಲಕಿಯ ಸಾವಿನ ಸುತ್ತ ಹಲವು ಅನುಮಾನ ಮೂಡಿಬಂದಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು