12:21 PM Monday11 - May 2026
ಬ್ರೇಕಿಂಗ್ ನ್ಯೂಸ್
ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..!

ಇತ್ತೀಚಿನ ಸುದ್ದಿ

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯ ಬಾಲಕಿಯ ಅನುಮಾನಾಸ್ಪದ ಸಾವು: ಕಿವಿಯೋಲೆ, ಕಾಲ್ಗೆಜ್ಜೆ ನಾಪತ್ತೆ; ಶ್ವಾನ ದಳ, ಬೆರಳಚ್ಚು ತಜ್ಞರ ಪರಿಶೀಲನೆ

19/09/2024, 22:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ‌ ಸ್ಟೇಷನ್ ಬಳಿ ನಡೆದಿದೆ.
ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯಗಳಾಗಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ. ತಂದೆ-ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ‌ ನಡೆದಿದೆ. ಮಂಜುನಾಥ್ ಹಾಗೂ ಮಂಗಳಾ ದಂಪತಿಯ ಪುತ್ರಿ ಈ 5 ವರ್ಷದ ಬಾಲಕಿ. ಮಗುವಿಗೆ ಜ್ವರ ಇತ್ತು ಎಂದು ದಂಪತಿ ಮನೆಯಲ್ಲೇ ಬಿಟ್ಟು ಹೋಗಿದ್ದರು.ದಂಪತಿ ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.ದಂಪತಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ
ಬಾಲಕಿ ಶವವಾಗಿ ಬಿದ್ದಿದ್ದಳು.


ಬಾಲಕಿಯ ಸಾವಿನ ಸುತ್ತ ಹಲವು ಅನುಮಾನ ಮೂಡಿಬಂದಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು