5:59 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ

20/09/2024, 15:17

ರಶ್ಮಿ ಶ್ರೀಕಾಂತ್ ನಾಯಕ್ ಶಿವಮೊಗ್ಗ

info.reporterkarnataka@gmail.com

ಶಾಂತಿ, ಸುವ್ಯವಸ್ಥೆಗೆ ಹೆಸರಾದ ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು.ಸೌಹಾರ್ದತೆ ಮೆರೆದಿದ್ದಾರೆ.
ಹೌದು.ಗುರುವಾರ ತೀರ್ಥಹಳ್ಳಿಯ ಛತ್ರಕೇರಿ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ಉಪಹಾರ ಹಾಗೂ ಬಾದಾಮಿ ಹಾಲಿನ ವ್ಯವಸ್ಥೆ ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಪಾಲ್ಗೊಂಡರು.
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಅನ್ನು ಸಂಭ್ರಮದಿಂದ ಆಚರಿಸುವ ಮೂಲಕ ತೀರ್ಥಹಳ್ಳಿಯ ಹಿಂದೂ ಮುಸ್ಲಿಂ ಬಾಂಧವರು
ಸೌಹಾರ್ದತೆ ಮೆರೆದಿದ್ದಾರೆ. ತೀರ್ಥಹಳ್ಳಿಯ ಮೆರವಣಿಗೆಯಲ್ಲಿ ಪಾಲ್ಗೊಂಡವರು ಧನ್ಯವಾದ ಅರ್ಪಿಸಿದ್ದಾರೆ.
ಶ್ರೀ ಸಿದ್ದಿ ವಿನಾಯಕ ಯುವಕ ಸಂಘದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ರಾಜಬೀದಿ ಉತ್ಸವದ ಸಮಯದಲ್ಲಿ
ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾ ಕಲಾತಂಡ ಹಾಗೂ ಸಂಘದ ಸದಸ್ಯರುಗಳಿಗೆ ಸೀಬಿನಕೆರೆ ಮೊಹರಂ ಕಮಿಟಿ, ಉಪಹಾರ ಹಾಗೂ ಬಾದಾಮಿ ಹಾಲು ವ್ಯವಸ್ಥೆಯನ್ನು ಮಾಡಿದ್ದರು.
ಈ ಸಂದರ್ಭದಲ್ಲಿ ಆ ವಾರ್ಡ್ ಸದಸ್ಯರಾದ ರತ್ನಾಕರ್ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು