9:54 PM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ನಂಜನಗೂಡು: ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಸರ್ಟಿಫಿಕೇಟ್ ವಿತರಣೆ

21/09/2024, 09:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿಕಸಿತ ಭಾರತದ ಪರಿಕಲ್ಪನೆಗಾಗಿ ಬಡವರ, ಹಿಂದುಳಿದ ಹಾಗೂ ವಿವಿಧ ಕುಲಕಸುಬು ಮತ್ತು ಕುಶಲಕರ್ಮಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಗಳಿಗೆ ಒಂದು ವರ್ಷ ತುಂಬಿದ ಹಿನ್ನೆಲೆ ಇಂದು ಮಹಾರಾಷ್ಟ್ರದ ವಾರ್ದದಲ್ಲಿ ಪಿಎಂ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮೊದಲ ವಾರ್ಷಿಕ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.


ಇದರ ಪ್ರಯುಕ್ತ ಇಂದು ನಂಜನಗೂಡಿನ ಮೊಸಾಯಿಕ್ ವರ್ಕ್ ಪ್ರೈವೇಟ್ ಲಿಮಿಟೆಡ್ ನ ವತಿಯಿಂದ ಸಂಸ್ಥೆಯಲ್ಲಿ ವಿವಿಧ ಕಸುಬುಗಳ ತರಬೇತಿ ಪಡೆದ ನೂರಾರು ಫಲಾನುಭವಿಗಳಿಗೆ ತರಬೇತಿ ಹಾಗೂ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.
ಮಂಜುರಾತಿ ಪತ್ರಗಳನ್ನು ವಿತರಿಸಿ NSTI ಮುಖ್ಯಸ್ಥೆ ಸುಜಾತ ಹಾಗೂ ಮೊಸಾಯಿಕ್ ವರ್ಕ್ ಸ್ಕಿಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಮಾತನಾಡಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಇದಾಗಿದ್ದು ಇದರಲ್ಲಿ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದೇ ಇದರ ಉದ್ದೇಶ ಹಾಗಾಗಿ ಸಣ್ಣ ಸಣ್ಣ ವ್ಯಾಪಾರಸ್ಥರು ಕುಶಲಕರ್ಮಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಯೋಜನೆಯಿಂದ ತರಬೇತಿ ಪಡೆದು ತರಬೇತಿ ಭತ್ಯದ ಜೊತೆಗೆ ಒಂದು ಲಕ್ಷ ರೂಪಾಯಿ ಸಾಲವನ್ನು ಪಡೆದುಕೊಂಡ ಕೆ. ಆರ್. ನಗರದ ಹೂ ಮಾರುವ ಶೋಭಾ ಎಂಬ ಮಹಿಳೆ ಮಾತನಾಡಿ ಇದೊಂದು ಒಳ್ಳೆಯ ಯೋಜನೆಯಾಗಿದ್ದು ನಮ್ಮಂತಹ ಬಡವರಿಗೆ ಸಹಾಯವಾಗಲಿದೆ ಎಂದು ತರಬೇತಿ ನೀಡಿದ ಸಂಸ್ಥೆ ಹಾಗೂ ಮೋದಿಜಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ನಂಜನಗೂಡು ಸೇರಿದಂತೆ ವಿವಿಧ ತಾಲೂಕುಗಳಿಂದ ಮಹಿಳೆಯರು ಸೇರಿದಂತೆ ಸಾವಿರಾರು ಮಂದಿ ತರಬೇತಿ ಪಡೆದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮುನ್ನ ಮಹಾರಾಷ್ಟ್ರದ ವಾರ್ದದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆಯ ಮೊದಲನೇ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಸಾರವನ್ನು ವೀಕ್ಷಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ಆಶಿಶ್ ಶುಕ್ಲ, ಐಸಿಐಸಿಐ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಕವಿತಾ, ನಗರಸಭೆ ಅಧಿಕಾರಿ ಶಫಿ, ಕಾವೇರಿ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ರೇಣುಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು