9:57 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ನಂಜನಗೂಡು: ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಸರ್ಟಿಫಿಕೇಟ್ ವಿತರಣೆ

21/09/2024, 09:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿಕಸಿತ ಭಾರತದ ಪರಿಕಲ್ಪನೆಗಾಗಿ ಬಡವರ, ಹಿಂದುಳಿದ ಹಾಗೂ ವಿವಿಧ ಕುಲಕಸುಬು ಮತ್ತು ಕುಶಲಕರ್ಮಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಗಳಿಗೆ ಒಂದು ವರ್ಷ ತುಂಬಿದ ಹಿನ್ನೆಲೆ ಇಂದು ಮಹಾರಾಷ್ಟ್ರದ ವಾರ್ದದಲ್ಲಿ ಪಿಎಂ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮೊದಲ ವಾರ್ಷಿಕ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.


ಇದರ ಪ್ರಯುಕ್ತ ಇಂದು ನಂಜನಗೂಡಿನ ಮೊಸಾಯಿಕ್ ವರ್ಕ್ ಪ್ರೈವೇಟ್ ಲಿಮಿಟೆಡ್ ನ ವತಿಯಿಂದ ಸಂಸ್ಥೆಯಲ್ಲಿ ವಿವಿಧ ಕಸುಬುಗಳ ತರಬೇತಿ ಪಡೆದ ನೂರಾರು ಫಲಾನುಭವಿಗಳಿಗೆ ತರಬೇತಿ ಹಾಗೂ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.
ಮಂಜುರಾತಿ ಪತ್ರಗಳನ್ನು ವಿತರಿಸಿ NSTI ಮುಖ್ಯಸ್ಥೆ ಸುಜಾತ ಹಾಗೂ ಮೊಸಾಯಿಕ್ ವರ್ಕ್ ಸ್ಕಿಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಮಾತನಾಡಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಇದಾಗಿದ್ದು ಇದರಲ್ಲಿ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದೇ ಇದರ ಉದ್ದೇಶ ಹಾಗಾಗಿ ಸಣ್ಣ ಸಣ್ಣ ವ್ಯಾಪಾರಸ್ಥರು ಕುಶಲಕರ್ಮಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಯೋಜನೆಯಿಂದ ತರಬೇತಿ ಪಡೆದು ತರಬೇತಿ ಭತ್ಯದ ಜೊತೆಗೆ ಒಂದು ಲಕ್ಷ ರೂಪಾಯಿ ಸಾಲವನ್ನು ಪಡೆದುಕೊಂಡ ಕೆ. ಆರ್. ನಗರದ ಹೂ ಮಾರುವ ಶೋಭಾ ಎಂಬ ಮಹಿಳೆ ಮಾತನಾಡಿ ಇದೊಂದು ಒಳ್ಳೆಯ ಯೋಜನೆಯಾಗಿದ್ದು ನಮ್ಮಂತಹ ಬಡವರಿಗೆ ಸಹಾಯವಾಗಲಿದೆ ಎಂದು ತರಬೇತಿ ನೀಡಿದ ಸಂಸ್ಥೆ ಹಾಗೂ ಮೋದಿಜಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ನಂಜನಗೂಡು ಸೇರಿದಂತೆ ವಿವಿಧ ತಾಲೂಕುಗಳಿಂದ ಮಹಿಳೆಯರು ಸೇರಿದಂತೆ ಸಾವಿರಾರು ಮಂದಿ ತರಬೇತಿ ಪಡೆದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮುನ್ನ ಮಹಾರಾಷ್ಟ್ರದ ವಾರ್ದದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆಯ ಮೊದಲನೇ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಸಾರವನ್ನು ವೀಕ್ಷಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ಆಶಿಶ್ ಶುಕ್ಲ, ಐಸಿಐಸಿಐ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಕವಿತಾ, ನಗರಸಭೆ ಅಧಿಕಾರಿ ಶಫಿ, ಕಾವೇರಿ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ರೇಣುಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು