6:04 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು

21/09/2024, 10:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡಿರುವ ಘಟನೆ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಕಾಮಾಕ್ಷಿಪಾಳ್ಯ ಬೊಮ್ಮಸಂದ್ರ ಮೂಲದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮಾಡುವ ಸಲುವಾಗಿ ಕೆ ಎ 51 ಬಿ 5616 ನಂಬರಿನ ಖಾಸಗಿ ಮಿನಿ ಬಸ್ ನಲ್ಲಿ ಕೇರಳಕ್ಕೆ ತೆರಳಿದ್ದಾರೆ.


ಸುಲಲಿತವಾಗಿ ದರ್ಶನ ಪಡೆದುಕೊಂಡು ಮರಳುತ್ತಿರುವಾಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ ಮಿನಿ ಬಸ್ ಚಾಲಕನ ಅತಿ ವೇಗ ಮತ್ತು ನಿದ್ರೆಗೆ ಜಾರಿದ ಪರಿಣಾಮ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿ ಕೊಂಡಿದ್ದಾರೆ‌ ಸಣ್ಣಪುಟ್ಟ ಗಾಯಗಳಾಗಿರುವ ಇವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.
ಮಿನಿ ಬಸ್ ಅಪಘಾತದಿಂದ ಬಿಡಿ ಭಾಗಗಳು ಛಿದ್ರ ವಾಗಿರುವ ದೃಶ್ಯ ನೋಡಿದ ಸಾರ್ವಜನಿಕರು ಬಸ್ಸಿನಲ್ಲಿ ಚಲಿಸುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪುನರ್ಜನ್ಮ ಎನ್ನುತ್ತಿದ್ದಾರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು