7:54 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು

21/09/2024, 10:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡಿರುವ ಘಟನೆ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಕಾಮಾಕ್ಷಿಪಾಳ್ಯ ಬೊಮ್ಮಸಂದ್ರ ಮೂಲದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮಾಡುವ ಸಲುವಾಗಿ ಕೆ ಎ 51 ಬಿ 5616 ನಂಬರಿನ ಖಾಸಗಿ ಮಿನಿ ಬಸ್ ನಲ್ಲಿ ಕೇರಳಕ್ಕೆ ತೆರಳಿದ್ದಾರೆ.


ಸುಲಲಿತವಾಗಿ ದರ್ಶನ ಪಡೆದುಕೊಂಡು ಮರಳುತ್ತಿರುವಾಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ ಮಿನಿ ಬಸ್ ಚಾಲಕನ ಅತಿ ವೇಗ ಮತ್ತು ನಿದ್ರೆಗೆ ಜಾರಿದ ಪರಿಣಾಮ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿ ಕೊಂಡಿದ್ದಾರೆ‌ ಸಣ್ಣಪುಟ್ಟ ಗಾಯಗಳಾಗಿರುವ ಇವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.
ಮಿನಿ ಬಸ್ ಅಪಘಾತದಿಂದ ಬಿಡಿ ಭಾಗಗಳು ಛಿದ್ರ ವಾಗಿರುವ ದೃಶ್ಯ ನೋಡಿದ ಸಾರ್ವಜನಿಕರು ಬಸ್ಸಿನಲ್ಲಿ ಚಲಿಸುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪುನರ್ಜನ್ಮ ಎನ್ನುತ್ತಿದ್ದಾರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು