2:50 AM Saturday21 - June 2025
ಬ್ರೇಕಿಂಗ್ ನ್ಯೂಸ್
Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ

21/09/2024, 10:20

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುಮಾರು 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಭೂಮಿ ಪೂಜೆ ನೆರವೇರಿಸಿದರು
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ರಾಜ್ಯ ಹೆದ್ದಾರಿ 2012 ಹಾಗೂ 47ರಲ್ಲಿ ಹುಲ್ಲಹಳ್ಳಿ, ಕಾರ್ಯ, ಮಾದಾಪುರ ಮಾರ್ಗವಾಗಿ ದುಗ್ಗಳ್ಳಿ ಗೇಟ್ ವರೆಗೆ ಹಾಗೂ ಹುರ, ಅರಿಯೂರು, ಮುಳ್ಳೂರು ರಸ್ತೆ ಸೇರಿದಂತೆ ಆಯ್ದ ಭಾಗಗಳಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗಾಗಿ ಶಾಸಕ ದರ್ಶನ್ ದ್ರುವ ನಾರಾಯಣ್ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಮತ್ತಿತರರು ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಕಾಮಗಾರಿಗೆ ಚಾಲನೆ ನೀಡಿ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಹಲವಾರು ವರ್ಷಗಳಿಂದ ಈ ರಸ್ತೆಗಳಲ್ಲಿ ತಿರುಗಾಡಲು ಸಾಧ್ಯವಾಗದಷ್ಟು ಹದಗೆಟ್ಟಿತ್ತು ಚುನಾವಣಾ ಸಮಯದಲ್ಲಿ ಮಾತು ಕೊಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿ 25 ಕೋಟಿ ಅನುದಾನ ತಂದು ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ ಅಲ್ಲದೆ ಕಳೆದ ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಈ ಸಂದರ್ಭ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅದರಂತೆ ಸಚಿವರಾದ ಜಾರಕಿಹೊಳಿ ಅವ್ರು ಕೂಡ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ ಎಂದು ಸ್ಮರಿಸಿ ನಮ್ಮ ತಂದೆಯಂತೆ ನಾನು ಕೂಡ ನಿಮ್ಮಲ್ಲಿ ಒಬ್ಬನಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ನಿಲ್ಲುತ್ತೇನೆ ನಿಮ್ಮ ಸಹಕಾರ ಇರಲಿ ಎಂದರು.


ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಪಡಿಸುತ್ತಿರುವ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಬಂದು ಶಾಸಕರನ್ನು ಗ್ರಾಮಸ್ಥರು ಪಟಾಕಿ ಸಿಡಿಸಿ ಮಾಲಾರ್ಪಣೆ ಮಾಡಿ ಗೌರವಿಸಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ, ಉಪಾಧ್ಯಕ್ಷ ಲೋಕೇಶ್, ಕೆಪಿಸಿಸಿ ಸದಸ್ಯ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡರಾದ ಮಾರುತಿ, ಮಾದಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು