4:55 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ

21/09/2024, 21:09

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ವಕೀಲರು ಮತ್ತು ಒಂದೂವರೆ ಸಾವಿರಕ್ಕೂ ಅಧಿಕ ಸಾರ್ವಜನಿಕರು ಎಂದರೆ ವಯೋವೃದ್ಧರು, ಮಹಿಳೆಯರು, ಯುವಕರು ಪೋಷಕರೊಂದಿಗೆ ಪುಟಾಣಿ ಮಕ್ಕಳು ನ್ಯಾಯಾಲಯಕ್ಕೆ ಆಗಮಿಸುತ್ತಾರೆ. ಇತ್ತಿಚೆಗೆ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತೆ ಸಂಪೂರ್ಣ ಮರೀಚಿಕೆಯಾಗಿದ್ದು, ಸೊಳ್ಳೆಗಳ ಕಾಟ ವಿಪರೀತ ಹೆಚ್ಚಾಗಿದೆ.
ಸೊಳ್ಳೆಗಳು ಕೇವಲ ಆವರಣದಲ್ಲಷ್ಟೇ ಅಲ್ಲದೆ ನ್ಯಾಯಾಲಯ ಒಳಗಡೆಯೂ ಕಾಟಕೊಡುತ್ತಿದ್ದು ಹಿರಿಯ ವಕೀಲರು ಸೇರಿಂದತೆ ಎಲ್ಲರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ತಮಗೆ ಅನೇಕ ಬಾರಿ ಮನವಿ ಮಾಡಿದ್ದು, ಇದೀಗ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಮನವಿ ಮಾಡುವುದೇನೆಂದರೆ, ಚಿತ್ರದುರ್ಗ ನಗರದ ಪೌರಸಿಬ್ಬಂದಿಗಳು ನಿತ್ಯ ನಗರದ ವಿವಿಧ ರಸ್ತೆ ಮತ್ತು ಚರಂಡಿ ಸ್ವಚ್ಛತೆ ಮಾಡುವಂತೆ ವಾರಕ್ಕೆ ಎರಡುದಿನ ಸೊಳ್ಳೆಗಳ ನಾಶಮಾಡಲು ಮತ್ತು ಸಾಂಕ್ರಾಮಿಕ ರೋಗ ತಡೆಯಲು ನ್ಯಾಯಾಲಯದ ಆವರಣದ ಪರಿಸರ ಸ್ವಚ್ಛತೆ ಮಾಡುವುದು ಅಗತ್ಯವಾಗಿದೆ.
ನ್ಯಾಯಾಲಯಕ್ಕೆ ಬರುವ ನಾಗರೀಕರ ಹಿತದೃಷ್ಟಿಯಿಂದ ಆವರಣದೊಳಗಿನ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಮಾಡಿಸಬೇಕೆಂದು ಮತ್ತು ಔಷಧಿ ಸಿಂಪಡಿಸಿ ಸೊಳ್ಳೆಗಳ ನಾಶಪಡಿಸಬೇಕು. ಪ್ರಮುಖವಾಗಿ ಸ್ವಚ್ಛತೆಗಾಗಿ ಇಬ್ಬರು ಪೌರಕಾರ್ಮಿಕರನ್ನು ನಿಯೋಜಿಸುವ ಮೂಲಕ ವಕೀಲರ ಆರೋಗ್ಯ ಮತ್ತು ನಾಗರೀಕರ ಹಿತರಕ್ಷಣೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಡಾ.ಎಂ.ಸಿ.ನರಹರಿ ಹಾಗೂ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು