8:30 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ

21/09/2024, 21:09

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ವಕೀಲರು ಮತ್ತು ಒಂದೂವರೆ ಸಾವಿರಕ್ಕೂ ಅಧಿಕ ಸಾರ್ವಜನಿಕರು ಎಂದರೆ ವಯೋವೃದ್ಧರು, ಮಹಿಳೆಯರು, ಯುವಕರು ಪೋಷಕರೊಂದಿಗೆ ಪುಟಾಣಿ ಮಕ್ಕಳು ನ್ಯಾಯಾಲಯಕ್ಕೆ ಆಗಮಿಸುತ್ತಾರೆ. ಇತ್ತಿಚೆಗೆ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತೆ ಸಂಪೂರ್ಣ ಮರೀಚಿಕೆಯಾಗಿದ್ದು, ಸೊಳ್ಳೆಗಳ ಕಾಟ ವಿಪರೀತ ಹೆಚ್ಚಾಗಿದೆ.
ಸೊಳ್ಳೆಗಳು ಕೇವಲ ಆವರಣದಲ್ಲಷ್ಟೇ ಅಲ್ಲದೆ ನ್ಯಾಯಾಲಯ ಒಳಗಡೆಯೂ ಕಾಟಕೊಡುತ್ತಿದ್ದು ಹಿರಿಯ ವಕೀಲರು ಸೇರಿಂದತೆ ಎಲ್ಲರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ತಮಗೆ ಅನೇಕ ಬಾರಿ ಮನವಿ ಮಾಡಿದ್ದು, ಇದೀಗ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಮನವಿ ಮಾಡುವುದೇನೆಂದರೆ, ಚಿತ್ರದುರ್ಗ ನಗರದ ಪೌರಸಿಬ್ಬಂದಿಗಳು ನಿತ್ಯ ನಗರದ ವಿವಿಧ ರಸ್ತೆ ಮತ್ತು ಚರಂಡಿ ಸ್ವಚ್ಛತೆ ಮಾಡುವಂತೆ ವಾರಕ್ಕೆ ಎರಡುದಿನ ಸೊಳ್ಳೆಗಳ ನಾಶಮಾಡಲು ಮತ್ತು ಸಾಂಕ್ರಾಮಿಕ ರೋಗ ತಡೆಯಲು ನ್ಯಾಯಾಲಯದ ಆವರಣದ ಪರಿಸರ ಸ್ವಚ್ಛತೆ ಮಾಡುವುದು ಅಗತ್ಯವಾಗಿದೆ.
ನ್ಯಾಯಾಲಯಕ್ಕೆ ಬರುವ ನಾಗರೀಕರ ಹಿತದೃಷ್ಟಿಯಿಂದ ಆವರಣದೊಳಗಿನ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಮಾಡಿಸಬೇಕೆಂದು ಮತ್ತು ಔಷಧಿ ಸಿಂಪಡಿಸಿ ಸೊಳ್ಳೆಗಳ ನಾಶಪಡಿಸಬೇಕು. ಪ್ರಮುಖವಾಗಿ ಸ್ವಚ್ಛತೆಗಾಗಿ ಇಬ್ಬರು ಪೌರಕಾರ್ಮಿಕರನ್ನು ನಿಯೋಜಿಸುವ ಮೂಲಕ ವಕೀಲರ ಆರೋಗ್ಯ ಮತ್ತು ನಾಗರೀಕರ ಹಿತರಕ್ಷಣೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಡಾ.ಎಂ.ಸಿ.ನರಹರಿ ಹಾಗೂ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು