2:24 PM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ

21/09/2024, 21:09

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ವಕೀಲರು ಮತ್ತು ಒಂದೂವರೆ ಸಾವಿರಕ್ಕೂ ಅಧಿಕ ಸಾರ್ವಜನಿಕರು ಎಂದರೆ ವಯೋವೃದ್ಧರು, ಮಹಿಳೆಯರು, ಯುವಕರು ಪೋಷಕರೊಂದಿಗೆ ಪುಟಾಣಿ ಮಕ್ಕಳು ನ್ಯಾಯಾಲಯಕ್ಕೆ ಆಗಮಿಸುತ್ತಾರೆ. ಇತ್ತಿಚೆಗೆ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತೆ ಸಂಪೂರ್ಣ ಮರೀಚಿಕೆಯಾಗಿದ್ದು, ಸೊಳ್ಳೆಗಳ ಕಾಟ ವಿಪರೀತ ಹೆಚ್ಚಾಗಿದೆ.
ಸೊಳ್ಳೆಗಳು ಕೇವಲ ಆವರಣದಲ್ಲಷ್ಟೇ ಅಲ್ಲದೆ ನ್ಯಾಯಾಲಯ ಒಳಗಡೆಯೂ ಕಾಟಕೊಡುತ್ತಿದ್ದು ಹಿರಿಯ ವಕೀಲರು ಸೇರಿಂದತೆ ಎಲ್ಲರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ತಮಗೆ ಅನೇಕ ಬಾರಿ ಮನವಿ ಮಾಡಿದ್ದು, ಇದೀಗ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಮನವಿ ಮಾಡುವುದೇನೆಂದರೆ, ಚಿತ್ರದುರ್ಗ ನಗರದ ಪೌರಸಿಬ್ಬಂದಿಗಳು ನಿತ್ಯ ನಗರದ ವಿವಿಧ ರಸ್ತೆ ಮತ್ತು ಚರಂಡಿ ಸ್ವಚ್ಛತೆ ಮಾಡುವಂತೆ ವಾರಕ್ಕೆ ಎರಡುದಿನ ಸೊಳ್ಳೆಗಳ ನಾಶಮಾಡಲು ಮತ್ತು ಸಾಂಕ್ರಾಮಿಕ ರೋಗ ತಡೆಯಲು ನ್ಯಾಯಾಲಯದ ಆವರಣದ ಪರಿಸರ ಸ್ವಚ್ಛತೆ ಮಾಡುವುದು ಅಗತ್ಯವಾಗಿದೆ.
ನ್ಯಾಯಾಲಯಕ್ಕೆ ಬರುವ ನಾಗರೀಕರ ಹಿತದೃಷ್ಟಿಯಿಂದ ಆವರಣದೊಳಗಿನ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಮಾಡಿಸಬೇಕೆಂದು ಮತ್ತು ಔಷಧಿ ಸಿಂಪಡಿಸಿ ಸೊಳ್ಳೆಗಳ ನಾಶಪಡಿಸಬೇಕು. ಪ್ರಮುಖವಾಗಿ ಸ್ವಚ್ಛತೆಗಾಗಿ ಇಬ್ಬರು ಪೌರಕಾರ್ಮಿಕರನ್ನು ನಿಯೋಜಿಸುವ ಮೂಲಕ ವಕೀಲರ ಆರೋಗ್ಯ ಮತ್ತು ನಾಗರೀಕರ ಹಿತರಕ್ಷಣೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಡಾ.ಎಂ.ಸಿ.ನರಹರಿ ಹಾಗೂ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು