6:07 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಗ್ರಾಹಕರ ಹಣಕ್ಕೆ ಕನ್ನ ಹಾಕಿದ್ದ ಆರೋಪಿ, ಯಡೂರಿನ ರಾಷ್ಟ್ರೀಕೃತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

21/09/2024, 21:21

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಬಿದ್ದು ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ಪೋರ್ಜರಿ ಮಾಡಿ ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತೀರ್ಥಹಳ್ಳಿ ತಾಲೂಕಿನ ಆರಗದ ಸುನಿಲ್ ( 35 ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ
ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಅಕೌಂಟ್ ಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿಗೂ ಅಧಿಕ ಹಣವನ್ನು ವಂಚಿಸಿದ್ದ. ಈ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸುನಿಲ್ ಜೈಲಿಗೆ ಸಹ ಹೋಗಿದ್ದ.
ನಂತರ ಜಾಮೀ ಮೇಲೆ ಹೊರ ಬಂದಿದ್ದ. ಈತ ಆನ್ಲೈನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ. ಆನ್ಲೈನ್ ವ್ಯವಹಾರ ನಡೆಸಿ ಹಣ ಕಳೆದುಕೊಂಡ ಸುನಿಲ್ ಮೊನ್ನೆ ಗುರುವಾರ ವಿಷ ಸೇವಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು