7:57 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗ್ರಾಹಕರ ಹಣಕ್ಕೆ ಕನ್ನ ಹಾಕಿದ್ದ ಆರೋಪಿ, ಯಡೂರಿನ ರಾಷ್ಟ್ರೀಕೃತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

21/09/2024, 21:21

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಬಿದ್ದು ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ಪೋರ್ಜರಿ ಮಾಡಿ ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತೀರ್ಥಹಳ್ಳಿ ತಾಲೂಕಿನ ಆರಗದ ಸುನಿಲ್ ( 35 ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ
ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಅಕೌಂಟ್ ಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿಗೂ ಅಧಿಕ ಹಣವನ್ನು ವಂಚಿಸಿದ್ದ. ಈ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸುನಿಲ್ ಜೈಲಿಗೆ ಸಹ ಹೋಗಿದ್ದ.
ನಂತರ ಜಾಮೀ ಮೇಲೆ ಹೊರ ಬಂದಿದ್ದ. ಈತ ಆನ್ಲೈನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ. ಆನ್ಲೈನ್ ವ್ಯವಹಾರ ನಡೆಸಿ ಹಣ ಕಳೆದುಕೊಂಡ ಸುನಿಲ್ ಮೊನ್ನೆ ಗುರುವಾರ ವಿಷ ಸೇವಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು