8:37 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ

21/09/2024, 23:00

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸರಕಾರದ ನಿಗಮ, ಮಂಡಳಿ, ಸಹಕಾರಿ ಬ್ಯಾಂಕ್, ಸರ್ಕಾರಿ ಹಾಸ್ಟಲ್, ಶಾಲೆ, ಕಾಲೇಜುಗಳಿಗೆ ನಾಮ‌ನಿರ್ದೇಶಿತ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕಲ್ಲುಕಂಬ ಪಂಪಾಪತಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿ ಯಲ್ಲಿ ಮುಖ್ಯಮಂತ್ರಿ,ಉಪ‌ ಮುಖ್ಯಮಂತ್ರಿ ಮತ್ತು ಸಚಿವರಿಗೆ ಒತ್ತಾಯದ ಮನವಿ ಮಾಡಿದರು.
ರಾಜ್ಯದಲ್ಲಿ 482 ವಿವಿಧ ಸಮಿತಿಗಳಿವೆ. ಅವುಗಳಿಗೆ ತಲಾ ಐದರಂತೆ ನೇಮಕ ಮಾಡಿದರೆ. ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಈ ಅವಕಾಶ ದೊರೆಯಲಿದೆ. ಇವರಿಗೆ ಸರ್ಕಾರದಿಂದ ಯಾವುದೇ ಗೌರವ ಧನ ಬೇಕಿಲ್ಲ. ಕೇವಲ ಗುರುತಿನ ಕಾರ್ಡು ನೀಡಿದರೆ ಸಾಕು ಎಂದಿದ್ದಾರೆ.
ಹೀಗೆ ನಾಮ‌ನಿರ್ದೇಶನ ಮಾಡುವಾಗ ಪರಿಶಿಷ್ಟರು, ಮಹಿಳೆಯರು, ಪದವೀಧರರು ಎಂದು ಮೀಸಲಾತಿ ಪರಿಗಣಿಸಬೇಕು. ಹೀಗೆ ಮಾಡಿದರೆ ಬಳ್ಳಾರಿ ಜಿಲ್ಲೆಯ 2,500 ಜನ ಪಕ್ಷದ ಕಾರ್ಯಕರ್ತರಿಗೆ ಅವಕಾಶ ದೊರೆಯಲಿದೆ ಎಂದರು.
ಪಕ್ಷಕ್ಕಾಗಿ ದುಡಿದವರಿಗೆ ಒಂದು ಸ್ಥಾನಮಾನ ಕಲ್ಪಿಸಲು ಇದು ಸದಾವಕಾಶ. ಸರ್ಕಾರ ಕೂಡಲೇ ನಾಮ‌ನಿರ್ದೇಶನ ಮಾಡಿ ಮುಗಿಸಬೇಕು ಎಂದು ಮನವಿ ಮಾಡಿದರು.
ಇನ್ನು ಕೆಲವು ಸಮುದಾಯಗಳಿಗೆ ಮಾತ್ರ ನಗರದಲ್ಲಿ ಸಭಾಂಗಣ ನಿರ್ಮಾಣಕ್ಕೆ ನಿವೇಶನ, ಸಭಾಂಗಣ ನಿರ್ಮಾಣ ಆಗಿದೆ. ಸಣ್ಣ ಸಮುದಾಯಗಳಿಗೆ ಆಗಿಲ್ಲ. ಅದಕ್ಕಾಗಿ ಒಂದೇ ಕಡೆ ಸಾಮೂಹಿಕ ವೇದಿಕೆ ಮಾಡಿ, ಅಲ್ಲಿ ಎಲ್ಲಾ ಸಮುದಾಯದ ಜನತೆಗೆ ನಿವೇಶನ ನೀಡಿ ಸಭಾಂಗಣಗಳನ್ನು ನಿರ್ಮಿಸಿ ಕೊಡಿ ಎಂದು ಸಹ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು