1:39 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​

21/09/2024, 23:03

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ವಾರ್ಷಿಕ ಪಟ್ಟಿಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್ ಮತ್ತು ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಹನುಮೇಶ್ ವೈದ್ಯ ಸತತ ಎರಡನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಶ್ವಿನ್ ಪಿ. ಇದೇ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ.
ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನ, ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯವು ವಾರ್ಷಿಕ ಪಟ್ಟಿ ಬಿಡುಗಡೆ ಮಾಡುತ್ತದೆ.
ಗುಣಮಟ್ಟದ ಸಂಶೋಧನಾ ಲೇಖನಗಳಿಗೆ ಹೆಸರುವಾಸಿಯಾಗಿರುವ ‘ಎಲ್ಸ್ವೀಯರ್’ ಎಂಬ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ. 2ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ವಿವಿಧ ವರ್ಗಗಳಲ್ಲಿ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು