7:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಳ್ಳಾರಿ: ದರೋಡೆಗೆ ಪೊಲೀಸ್ ಸಾಥ್; ಹೆಡ್ ಕಾನ್ ಸ್ಟೇಬಲ್ ಸೇರಿ 7 ಆರೋಪಿಗಳ ಬಂಧನ

21/09/2024, 23:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಳ್ಳರ ಜೊತೆಗೆ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ.
ನಗರದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗುಂಪಿಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ ಬಂಧಿಸಲಾಗಿದೆ.
ಈ ಘಟನೆಯ ಕುರಿತು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ದಾರೆ.
ರಘು ಎನ್ನುವ ಉದ್ಯಮಿ ‌ ಸೆ.12 ರಂದು ಬೆಳಿಗಿನ ಜಾವ ಬೈಕ್ ನಲ್ಲಿ 22 ಲಕ್ಷದ 99 ಸಾವಿರ ನಗದು ಮತ್ತು 318 ಗ್ರಾಂ ಬಂಗಾರ ತೆಗೆದುಕೊಂಡು ಹೋಗುತ್ತಿದ್ದರು. ರಾಯದುರ್ಗಾ ಬಸ್ ನಿಲ್ದಾಣದ ಕಡೆ ಹೋಗುತ್ತಿರುವಾಗ ಅವರಿಗೆ ಕಣ್ಣಿಗೆ ಖಾರದ ಪುಡಿ ಎರಚಿ ಹಣ ಒಡೆವೆ ದರೋಡೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಮುಖ ಆರೋಪಿ ತೌಸೀಫ್ ಜಾವೀದ್, ಪೀರ್, ದಾದಾ ಖಲಂದರ್, ಮುಸ್ತಕಾ ಅಲಿ ರೆಹಮಾನ್, ಆರೀಫ್ ನನ್ನು ಬಂಧಿಸಿದ್ದಾರೆ. ಕಳ್ಳತನಕ್ಕೆ ಸಾಥ್‌ ನೀಡಿದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಮೆಹಬೂಬ್ ಪಾಷನನ್ನೂ ಬಂಧಿಸಲಾಗಿದೆ.
ಹೆಡ್‌ ಕಾನ್ಸಟೇಬಲ್ ಮೆಹಬೂಬ್ ಪಾಷ ಮತ್ತು ಪ್ರಮುಖ ಆರೋಪಿ ಅಸೀಫ್ ಆತ್ಮೀಯ ಗೆಳೆಯರಾಗಿದ್ದರು. ಅಸೀಫ್ ಈ ಮೊದಲು ಹೋಮ್ ಗಾರ್ಡ್ ಕೆಲಸ ಮಾಡುತ್ತಿದ್ದ. ಆ ಸಲುಗೆಯಿಂದಲೇ ದರೋಡೆ ಮಾಡುವ ಪ್ಲಾನ್ ಮಾಡಲಾಗಿತ್ತು. ಆರೋಪಗಳನ್ನು ಬಂಧಿಸಿದಾಗ ಹೆಡ್ ಕಾನ್ಸಟೇಬಲ್ ಪಾತ್ರ ಇರುವುದು ಬಯಲಿಗೆ ಬಂದಿದೆ.

ದರೋಡೆ ಹಣದಲ್ಲಿ ಹೆಡ್ ಕಾನ್ಸಟೇಬಲ್ ಮೆಹಬೂಬ್ 9 ಲಕ್ಷ ಹಣವನ್ನು ಪಡೆದಿದ್ದಾರೆ. ಪೊಲೀಸರು ಸದ್ಯ 15 ಲಕ್ಷದ 91 ಸಾವಿರ ರೂ ನಗದು ಮತ್ತು116 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು