6:05 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಬಳ್ಳಾರಿ: ದರೋಡೆಗೆ ಪೊಲೀಸ್ ಸಾಥ್; ಹೆಡ್ ಕಾನ್ ಸ್ಟೇಬಲ್ ಸೇರಿ 7 ಆರೋಪಿಗಳ ಬಂಧನ

21/09/2024, 23:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಳ್ಳರ ಜೊತೆಗೆ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ.
ನಗರದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗುಂಪಿಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ ಬಂಧಿಸಲಾಗಿದೆ.
ಈ ಘಟನೆಯ ಕುರಿತು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ದಾರೆ.
ರಘು ಎನ್ನುವ ಉದ್ಯಮಿ ‌ ಸೆ.12 ರಂದು ಬೆಳಿಗಿನ ಜಾವ ಬೈಕ್ ನಲ್ಲಿ 22 ಲಕ್ಷದ 99 ಸಾವಿರ ನಗದು ಮತ್ತು 318 ಗ್ರಾಂ ಬಂಗಾರ ತೆಗೆದುಕೊಂಡು ಹೋಗುತ್ತಿದ್ದರು. ರಾಯದುರ್ಗಾ ಬಸ್ ನಿಲ್ದಾಣದ ಕಡೆ ಹೋಗುತ್ತಿರುವಾಗ ಅವರಿಗೆ ಕಣ್ಣಿಗೆ ಖಾರದ ಪುಡಿ ಎರಚಿ ಹಣ ಒಡೆವೆ ದರೋಡೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಮುಖ ಆರೋಪಿ ತೌಸೀಫ್ ಜಾವೀದ್, ಪೀರ್, ದಾದಾ ಖಲಂದರ್, ಮುಸ್ತಕಾ ಅಲಿ ರೆಹಮಾನ್, ಆರೀಫ್ ನನ್ನು ಬಂಧಿಸಿದ್ದಾರೆ. ಕಳ್ಳತನಕ್ಕೆ ಸಾಥ್‌ ನೀಡಿದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಮೆಹಬೂಬ್ ಪಾಷನನ್ನೂ ಬಂಧಿಸಲಾಗಿದೆ.
ಹೆಡ್‌ ಕಾನ್ಸಟೇಬಲ್ ಮೆಹಬೂಬ್ ಪಾಷ ಮತ್ತು ಪ್ರಮುಖ ಆರೋಪಿ ಅಸೀಫ್ ಆತ್ಮೀಯ ಗೆಳೆಯರಾಗಿದ್ದರು. ಅಸೀಫ್ ಈ ಮೊದಲು ಹೋಮ್ ಗಾರ್ಡ್ ಕೆಲಸ ಮಾಡುತ್ತಿದ್ದ. ಆ ಸಲುಗೆಯಿಂದಲೇ ದರೋಡೆ ಮಾಡುವ ಪ್ಲಾನ್ ಮಾಡಲಾಗಿತ್ತು. ಆರೋಪಗಳನ್ನು ಬಂಧಿಸಿದಾಗ ಹೆಡ್ ಕಾನ್ಸಟೇಬಲ್ ಪಾತ್ರ ಇರುವುದು ಬಯಲಿಗೆ ಬಂದಿದೆ.

ದರೋಡೆ ಹಣದಲ್ಲಿ ಹೆಡ್ ಕಾನ್ಸಟೇಬಲ್ ಮೆಹಬೂಬ್ 9 ಲಕ್ಷ ಹಣವನ್ನು ಪಡೆದಿದ್ದಾರೆ. ಪೊಲೀಸರು ಸದ್ಯ 15 ಲಕ್ಷದ 91 ಸಾವಿರ ರೂ ನಗದು ಮತ್ತು116 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು