10:54 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

22/09/2024, 13:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ಅ ಹೊಂಡದಲ್ಲಿ ರಸ್ತೆ ಕಾಂಕ್ರೀಟ್ ಗೆ ಬಳಸಿದ ಕಬ್ಬಿಣದ ರಾಡ್ ಗಳು ಎದ್ದು ನಿಂತಿದೆ. ಈ ಗುಂಡಿ ಇತ್ತೀಚೆಗೆ ಮೂರು ನಾಲ್ಕು ತಿಂಗಳುಗಳಿಂದ ಹಿಗೆ ಕಬ್ಬಿಣದ ರಾಡ್ ಕಾಣುವಂತೆ ಇದ್ದರು ಕೂಡ ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳು ಇದೆ ರಸ್ತೆಯಲ್ಲಿ ಪ್ರತಿ ದಿನ ಓಡಾಟ ಮಾಡುತ್ತಿದ್ದರು ಕೂಡ ಈ ಹೊಂಡ ಗುಂಡಿ ಗಮನಿಸಲಿಲ್ಲವೆ ಎನ್ನುವ ಮಾತು ಕೂಡ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.


ಈಗಾಗಲೇ ಕಾಂಕ್ರೀಟ್ ಸ್ಲ್ಯಾಬ್ ಬಾಯಿ ತೆರೆದ ಗುಂಡಿಗಳು ಹಾಗೆಯೇ ಬಾಯ್ತೆರೆದುಕೊಂಡಿದ್ದು ಕಬ್ಬಿಣದ ರಾಡ್ ಕಾಣುತ್ತಿದ್ದರು ಅಪಾಯಕ್ಕೆ ಆಹ್ವಾನ ನಿಡುತ್ತಿದ್ದರು. ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳ ಬೆಜಾವಬ್ದರಿ ಎದ್ದು ತೋರಿಸುತ್ತಿದೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ ಎಲ್ಲಿಯಾದರೂ ರಾತ್ರಿ ಸಮಯದಲ್ಲಿ ವಾಹನ ಓಡಾಡುವ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಟಯರ್ ಪಂಕ್ಚರ್ ಆಗಿ ಯಾವುದಾದರೂ ಅನಾಹುತವಾದರೆ ಯಾರು ಹೊಣೆ? ಆ ಗುಂಡಿಯಿಂದ ಎದ್ದು ನಿಂತ ಕಬ್ಬಿಣದ ರಾಡ್ ರಸ್ತೆಯಲ್ಲಿ ಓಡಾಡುವ ವಾಹನ ಸವಾರರ ಪ್ರಾಣಕ್ಕೆ ಅಪಾಯವಾಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಮೂಲಕ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವಾಹನ ಸವಾರರು ಮತ್ತು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು