2:02 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೇಲಿನಕುರುವಳ್ಳಿ ನ್ಯಾಯಬೆಲೆ ಅಂಗಡಿ ಸಿಬ್ಬಂದಿಗಳ ದರ್ಪ !: ಪಡಿತರ ಅಕ್ಕಿಯನ್ನು ಫಲಾನುಭವಿಗಳೇ ಹಾಕಿಕೊಳ್ಳಬೇಕಂತೆ! ಇದ್ಯಾವ ಕಾನೂನು?

22/09/2024, 20:57

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಅತೀ ದೊಡ್ಡ ಗ್ರಾಮಪಂಚಾಯಿತಿಯಾಗಿರುವ ಮೇಲಿನಕುರುವಳ್ಳಿಯಲ್ಲಿರುವ ಹರಿಜನ ಗಿರಿಜನ ಕಲ್ಲುಕುಟಿಕರ ಸಂಘದ ಕಟ್ಟಡದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ತುಂಬಿಸಿಕೊಳ್ಳಬೇಕಂತೆ. ಕೇಳಿದರೆ ದರ್ಪದ ಮಾತುಗಳನ್ನು ಅಲ್ಲಿನ ಸಿಬ್ಬಂದಿಗಳು ಆಡುತ್ತಾರೆ.
ಹೌದು,ಸರ್ಕಾರ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ಹಾಕಿಕೊಳ್ಳಬೇಕಂತೆ, ಇದನ್ನು ಪ್ರೆಶ್ನೆ ಮಾಡಿದಕ್ಕೆ ಅಕ್ಕಿ ಸರಿ ಇಲ್ಲ ಎಂದು ಹೇಳುತ್ತೀರಾ? ನಿಮಗೆ ಯಾವ ಅಕ್ಕಿ ಬೇಕೋ ಅದನ್ನು ಹಾಕಿಕೊಳ್ಳಿ ನಾನು ತೂಕ ಮಾಡಿ ಕೊಡುತ್ತೇನೆ ಎಂದು ಅಲ್ಲಿನ ಸಿಬ್ಬಂದಿಯೊಬ್ಬರು ಅತ್ಯಂತ ದರ್ಪದಿಂದ ಮಾತನಾಡುತ್ತಾರೆ. ಅಕ್ಕಿಯನ್ನು ಚೀಲದಿಂದ ನೆಲಕ್ಕೆ ಸುರಿದು ಹಾಕಿದ್ದು ಅದರಲ್ಲಿ ಇಲಿ ಪಿಕ್ಕಿ ಸೇರಿ ಇತರ ಕಸ ಇದ್ದು ಅದನ್ನು ನೋಡಿದವರು ಬೇರೆ ಅಕ್ಕಿ ಕೊಡಿ ಎನ್ನುವುದು ಸಹಜ. ಆದರೆ ಅಲ್ಲಿನ ಸಿಬ್ಬಂದಿಯೊಬ್ಬರು ನಿಮಗೆ ಬೇಕಾದ ಅಕ್ಕಿ ನೀವೇ ಹಾಕಿಕೊಳ್ಳಿ ಎಂದು ನ್ಯಾಯಬೆಲೆ ಅಂಗಡಿಗೆ ಬರುವ ಪಡಿತರ ಪಲಾನುಭವಿಗಳಿಗೆ ಸಾರ್ವಜನಿಕರಿಗೆ ದರ್ಪದಿಂದ ಹೇಳುತ್ತಾರೆ ಎಂದು ಅನೇಕ ಪಲಾನುಭವಿಗಳು ದೂರಿದ್ದಾರೆ.

ಸಿಬ್ಬಂದಿಗಳ ಕೊರತೆ ಇದ್ದರೆ ಮತ್ತೊರ್ವ ಪುರುಷ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಅದನ್ನು ಬಿಟ್ಟು ನ್ಯಾಯ ಬೆಲೆ ಅಂಗಡಿಗೆ ಬಂದಂತಹ ಪಡಿತರ ಫಲಾನುಭವಿಗಳಿಗೆ ದರ್ಪದಿಂದ ಮಾತನಾಡುವುದು ಪ್ರಶ್ನೆ ಮಾಡಿದರೆ ಅಕ್ಕಿ ಸರಿ ಇಲ್ಲ ಎನ್ನುತ್ತಾರೆ ಎಂದು ಸಾರ್ವಜನಿಕರನ್ನೇ ದೂರುವುದು ನ್ಯಾಯವೇ? ಈ ಹಿಂದೆಯೂ ಕೂಡ ಇದೆ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿಗಳು ದರ್ಪದ ಮಾತುಗಳನ್ನಾಡಿದ ದೂರುಗಳು ಕೇಳಿ ಬಂದಿತ್ತು ಎಂದು ಸಾರ್ವಜನಿಕವಾಗಿ ಮಾತು ಕೇಳಿ ಬರುತ್ತಿದೆ. ಇದರ ಬಗ್ಗೆ ಆಹಾರ ನಿರೀಕ್ಷಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಅನೇಕ ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು