6:56 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಮೇಲಿನಕುರುವಳ್ಳಿ ನ್ಯಾಯಬೆಲೆ ಅಂಗಡಿ ಸಿಬ್ಬಂದಿಗಳ ದರ್ಪ !: ಪಡಿತರ ಅಕ್ಕಿಯನ್ನು ಫಲಾನುಭವಿಗಳೇ ಹಾಕಿಕೊಳ್ಳಬೇಕಂತೆ! ಇದ್ಯಾವ ಕಾನೂನು?

22/09/2024, 20:57

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಅತೀ ದೊಡ್ಡ ಗ್ರಾಮಪಂಚಾಯಿತಿಯಾಗಿರುವ ಮೇಲಿನಕುರುವಳ್ಳಿಯಲ್ಲಿರುವ ಹರಿಜನ ಗಿರಿಜನ ಕಲ್ಲುಕುಟಿಕರ ಸಂಘದ ಕಟ್ಟಡದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ತುಂಬಿಸಿಕೊಳ್ಳಬೇಕಂತೆ. ಕೇಳಿದರೆ ದರ್ಪದ ಮಾತುಗಳನ್ನು ಅಲ್ಲಿನ ಸಿಬ್ಬಂದಿಗಳು ಆಡುತ್ತಾರೆ.
ಹೌದು,ಸರ್ಕಾರ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ಹಾಕಿಕೊಳ್ಳಬೇಕಂತೆ, ಇದನ್ನು ಪ್ರೆಶ್ನೆ ಮಾಡಿದಕ್ಕೆ ಅಕ್ಕಿ ಸರಿ ಇಲ್ಲ ಎಂದು ಹೇಳುತ್ತೀರಾ? ನಿಮಗೆ ಯಾವ ಅಕ್ಕಿ ಬೇಕೋ ಅದನ್ನು ಹಾಕಿಕೊಳ್ಳಿ ನಾನು ತೂಕ ಮಾಡಿ ಕೊಡುತ್ತೇನೆ ಎಂದು ಅಲ್ಲಿನ ಸಿಬ್ಬಂದಿಯೊಬ್ಬರು ಅತ್ಯಂತ ದರ್ಪದಿಂದ ಮಾತನಾಡುತ್ತಾರೆ. ಅಕ್ಕಿಯನ್ನು ಚೀಲದಿಂದ ನೆಲಕ್ಕೆ ಸುರಿದು ಹಾಕಿದ್ದು ಅದರಲ್ಲಿ ಇಲಿ ಪಿಕ್ಕಿ ಸೇರಿ ಇತರ ಕಸ ಇದ್ದು ಅದನ್ನು ನೋಡಿದವರು ಬೇರೆ ಅಕ್ಕಿ ಕೊಡಿ ಎನ್ನುವುದು ಸಹಜ. ಆದರೆ ಅಲ್ಲಿನ ಸಿಬ್ಬಂದಿಯೊಬ್ಬರು ನಿಮಗೆ ಬೇಕಾದ ಅಕ್ಕಿ ನೀವೇ ಹಾಕಿಕೊಳ್ಳಿ ಎಂದು ನ್ಯಾಯಬೆಲೆ ಅಂಗಡಿಗೆ ಬರುವ ಪಡಿತರ ಪಲಾನುಭವಿಗಳಿಗೆ ಸಾರ್ವಜನಿಕರಿಗೆ ದರ್ಪದಿಂದ ಹೇಳುತ್ತಾರೆ ಎಂದು ಅನೇಕ ಪಲಾನುಭವಿಗಳು ದೂರಿದ್ದಾರೆ.

ಸಿಬ್ಬಂದಿಗಳ ಕೊರತೆ ಇದ್ದರೆ ಮತ್ತೊರ್ವ ಪುರುಷ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಅದನ್ನು ಬಿಟ್ಟು ನ್ಯಾಯ ಬೆಲೆ ಅಂಗಡಿಗೆ ಬಂದಂತಹ ಪಡಿತರ ಫಲಾನುಭವಿಗಳಿಗೆ ದರ್ಪದಿಂದ ಮಾತನಾಡುವುದು ಪ್ರಶ್ನೆ ಮಾಡಿದರೆ ಅಕ್ಕಿ ಸರಿ ಇಲ್ಲ ಎನ್ನುತ್ತಾರೆ ಎಂದು ಸಾರ್ವಜನಿಕರನ್ನೇ ದೂರುವುದು ನ್ಯಾಯವೇ? ಈ ಹಿಂದೆಯೂ ಕೂಡ ಇದೆ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿಗಳು ದರ್ಪದ ಮಾತುಗಳನ್ನಾಡಿದ ದೂರುಗಳು ಕೇಳಿ ಬಂದಿತ್ತು ಎಂದು ಸಾರ್ವಜನಿಕವಾಗಿ ಮಾತು ಕೇಳಿ ಬರುತ್ತಿದೆ. ಇದರ ಬಗ್ಗೆ ಆಹಾರ ನಿರೀಕ್ಷಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಅನೇಕ ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು