8:55 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬಣಕಲ್ ಹೋಬಳಿ ಕಸಾಪ ಪದಗ್ರಹಣ; ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲ: ಸೂರಿ ಶ್ರೀನಿವಾಸ್

22/09/2024, 23:32

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲತೆ ಹೊಂದುತ್ತಾನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಬಣಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಕಸಾಪದ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಪ್ರತಿ ಜಿಲ್ಲೆ, ತಾಲ್ಲೂಕು ಹಾಗೂ ಪ್ರತಿ ಗ್ರಾಮಗಳಲ್ಲಿ ನುಡಿ ನಿತ್ಯೋತ್ಸವ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿದೆ’ಎಂದರು. ಯುರೇಕಾ ಆಕಾಡೇಮಿಯ ಅಧ್ಯಕ್ಷ ದೀಪಕ್ ದೊಡ್ಡಯ್ಯ ಮಾತನಾಡಿ’ಯಾವುದೇ ಕೆಲಸವನ್ನು ನಾಯಕನ ಜತೆಗೆ ತಂಡವಾಗಿ ಕೆಲಸ ನಿರ್ವಹಿಸಿದರೆ ಎಲ್ಲವೂ ಕೆಲಸಗಳು ಸುಲಭದಲ್ಲಿ ನಿರ್ವಹಿಸಬಹುದು’ಎಂದು ಹೇಳಿದರು.
ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್ ಗೌಡ ಮಾತನಾಡಿ’ಬಣಕಲ್ ನಲ್ಲಿ ಕಸಾಪದ ತಿಂಗಳ ಸಾಹಿತ್ಯ ಬೆಳೆಯಬೇಕಾದರೆ ಮೋಹನ್ ಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ ದೀಪಕ್ ದೊಡ್ಡಯ್ಯ,ಮಗ್ಗಲಮಕ್ಕಿ ಗಣೇಶ್ ಸೇರಿದಂತೆ ಹಲವರ ಪರಿಶ್ರಮ ಅಪಾರವಾಗಿದೆ ಎಂದು ಸ್ಮರಿಸಿದರು. ಸ್ಥಾಪಕ ಅಧ್ಯಕ್ಷ ಪೂರ್ವಾಧ್ಯಕ್ಷ ಸುರೇಶ್ ಎಸ್.ಶೆಟ್ಟಿ, ಟಿ.ಎಂ.ಆದರ್ಶ್,ಮುಖ್ಯ ಶಿಕ್ಷಕ ಜಿ.ಎಚ್.ಶ್ರೀನಿವಾಸ್,ಮಗ್ಗಲಮಕ್ಕಿಗಣೇಶ್,ಶಾಂತಕುಮಾರ್,
ಟಿ.ಎಂ.ಗಜೇಂದ್ರ,ಎಲ್.ಬಿ.ರಮೇಶ್,ಬಿ.ಕೆ.ದಿನೇಶ್,ಝರೀನಾ,ಬಿ.ಶಿವರಾಮ ಶೆಟ್ಟಿ,ಬಿ.ಎಂ.ಶಂಕರ್,ಎಲ್.ಬಿ.ಲೋಕೇಶ್ ಮಾತನಾಡಿದರು.

ಬಿ.ಕೆ.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಟಿ.ಎಂ.ಆದರ್ಶ್ ಅವರು ನೂತನ ಅಧ್ಯಕ್ಷ ಬಿ.ಕೆ. ಲೋಕೇಶ್ ಅವರಿಗೆ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅನಿತಾ ಜಗದೀಪ್, ವಿಶಾಲನಾಗರಾಜ್, ಭಕ್ತೇಶ್, ವಸಂತ್ ಹಾರ್ಗೋಡು, ಸಂಪತ್ ಬೆಟ್ಟಗೆರೆ , ನಾಟ್ಯರಂಜಿತ್, ಸಂಜಯ್ ಗೌಡ,ಸ್ವಾತಿ ನವೀನ್, ಆರೀಫ್, ಹೊರಟ್ಟಿ ರಘು, ಸಂಜಯ್ ಗೌಡ,ಬಕ್ಕಿ ಮಂಜುನಾಥ್,ರಾಮಚಂದ್ರ,ಬಿ.ಎಸ್.ವಿಕ್ರಂ,ಬಿ.ಕೆ.ದಿನೇಶ್,ಯತೀಶ್ ಕುಮಾರ್, ಶರತ್ ಫಲ್ಗುಣಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು