6:06 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಶಿಕಾರಿಪುರ ಬಳಿ ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ವ್ಯಕ್ತಿ ದುರ್ಮರಣ

23/09/2024, 22:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ ಮಾಡುತ್ತಿರುವ ವೇಳೆ ಬೈಕ್ ಬಂದು ಗುದ್ದಿದ ಪರಿಣಾಮ ರಸ್ತೆಯಲ್ಲಿ
ಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಶಿಕಾರಿಪುರದಲ್ಲಿ
ಇಂದು ಸಂಜೆ ನಡೆದಿದೆ.
ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 )ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ
ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ ಬದಲಾವಣೆ ಮಾಡುತ್ತಿರುವಾಗ ಶಿಕಾರಿಪುರದಿಂದ ಹೊನ್ನಳ್ಳಿ ಹೋಗುವ KA 01 EB 4020 ಸಂಖ್ಯೆಯ ಬಜಾಜ್ ಸಿಟಿ 100 ಬೈಕ್ ಸವಾರ ಬಸವರಾಜ್ ಗುದ್ದಿದ ಪರಿಣಾಮವಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ತೀರ್ಥಹಳ್ಳಿಯಿಂದ ಕೆಲಸದ ಮೇಲೆ KA 14 B 0842 ಸಂಖ್ಯೆಯ ಲಾರಿಯನ್ನು ತೆಗೆದುಕೊಂಡು ರಮೇಶ್ ಶಿಕಾರಿಪುರಕ್ಕೆ ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು