3:46 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅರುಣಗಿರಿ ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಸಬ್ ಇನ್ಸ್ಪೆಕ್ಟರ್ ಶಿವನ್ ಗೌಡ ಮೆಚ್ಚುಗೆ

23/09/2024, 22:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆಗೆ 1 ಕಿಲೋ ಮೀಟರ್ ದೂರದ ಡಾಂಬರ್ ರಸ್ತೆ ಭಾರಿ ಮಳೆಯಿಂದಾಗಿ ಹೊಂಡ ಗುಂಡಿಗಳಾಗಿದ್ದವು.
ಅರುಣಗಿರಿ ಕುಣಿಗದ್ದೆ ದಾಸನಗದ್ದೆಯ ಗ್ರಾಮಸ್ಥರು ಮತ್ತು ವಿನಾಯಕ ಸೇವಾ ಸಮಿತಿಯವರೆಲ್ಲರೂ ಸೇರಿ ತಾವೇ ಹೊಂಡ ಮುಚ್ಚುವ ಮಹತ್ಕಾರ್ಯಕ್ಕೆ ಕೈ ಜೋಡಿಸಿ ಭಾನುವಾರ ಹೊಂಡ ಗುಂಡಿ ಮುಚ್ಚುವ ಕಾರ್ಯ ನೆರವೇರಿಸಿದರು.
ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ತೀರ್ಥಹಳ್ಳಿಯ ಪೊಲೀಸ್ ಸಬ್ ಇನ್ಸಪೆಕ್ಟರ್ ಶಿವನ್ ಗೌಡರವರು ಗ್ರಾಮಸ್ಥರ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತದಾನದ ವೇಳೆ ಚುನಾವಣೆ ಸಮಯದಲ್ಲಿ ರಸ್ತೆ ಆಗಿಲ್ಲ ಎಂದು ಬಹಿಷ್ಕಾರ ಹಾಕುವ ಬದಲು ಹೀಗೆ ತಮ್ಮ ಊರಿನ ರಸ್ತೆಗಳನ್ನು ಹಾಗೂ ಅಕ್ಕ ಪಕ್ಕದ ಊರಿನ ಸ್ವಚ್ಛತೆಯನ್ನು ನಾವೇ ಸರಿ ಪಡಿಸಿಕೊಂಡಿದ್ದರೆ ನಮ್ಮೆಲ್ಲರ ಗ್ರಾಮ, ಊರು ಸ್ವಚ್ಛಂದವಾಗಿರಲಿದೆ. ನಿಮ್ಮೆಲ್ಲರ ಸಮಾಜಮುಖಿ ಕೆಲಸ ಮುಂದುವರೆಸಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು