10:42 PM Monday23 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಅರುಣಗಿರಿ ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಸಬ್ ಇನ್ಸ್ಪೆಕ್ಟರ್ ಶಿವನ್ ಗೌಡ ಮೆಚ್ಚುಗೆ

23/09/2024, 22:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆಗೆ 1 ಕಿಲೋ ಮೀಟರ್ ದೂರದ ಡಾಂಬರ್ ರಸ್ತೆ ಭಾರಿ ಮಳೆಯಿಂದಾಗಿ ಹೊಂಡ ಗುಂಡಿಗಳಾಗಿದ್ದವು.
ಅರುಣಗಿರಿ ಕುಣಿಗದ್ದೆ ದಾಸನಗದ್ದೆಯ ಗ್ರಾಮಸ್ಥರು ಮತ್ತು ವಿನಾಯಕ ಸೇವಾ ಸಮಿತಿಯವರೆಲ್ಲರೂ ಸೇರಿ ತಾವೇ ಹೊಂಡ ಮುಚ್ಚುವ ಮಹತ್ಕಾರ್ಯಕ್ಕೆ ಕೈ ಜೋಡಿಸಿ ಭಾನುವಾರ ಹೊಂಡ ಗುಂಡಿ ಮುಚ್ಚುವ ಕಾರ್ಯ ನೆರವೇರಿಸಿದರು.
ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ತೀರ್ಥಹಳ್ಳಿಯ ಪೊಲೀಸ್ ಸಬ್ ಇನ್ಸಪೆಕ್ಟರ್ ಶಿವನ್ ಗೌಡರವರು ಗ್ರಾಮಸ್ಥರ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತದಾನದ ವೇಳೆ ಚುನಾವಣೆ ಸಮಯದಲ್ಲಿ ರಸ್ತೆ ಆಗಿಲ್ಲ ಎಂದು ಬಹಿಷ್ಕಾರ ಹಾಕುವ ಬದಲು ಹೀಗೆ ತಮ್ಮ ಊರಿನ ರಸ್ತೆಗಳನ್ನು ಹಾಗೂ ಅಕ್ಕ ಪಕ್ಕದ ಊರಿನ ಸ್ವಚ್ಛತೆಯನ್ನು ನಾವೇ ಸರಿ ಪಡಿಸಿಕೊಂಡಿದ್ದರೆ ನಮ್ಮೆಲ್ಲರ ಗ್ರಾಮ, ಊರು ಸ್ವಚ್ಛಂದವಾಗಿರಲಿದೆ. ನಿಮ್ಮೆಲ್ಲರ ಸಮಾಜಮುಖಿ ಕೆಲಸ ಮುಂದುವರೆಸಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು