9:03 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹ

24/09/2024, 19:40

ಮಂಗಳೂರು(reporterkarnataka.com):ಜಾತಿವಾದಿ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದೆ.
ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ ಮುನಿರತ್ನ, ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ, ರಾಜ್ಯದ ಅಪಾರ ದಲಿತರ ಮತ್ತು ಮಹಿಳೆಯರ ಮನಸ್ಸಿಗೆ ಅತೀವ ನೋವು ಉಂಟಾಗಿದ್ದು, ದೇಶ ಸ್ವಾತಂತ್ರ್ಯ ಕಂಡು 75 ವರ್ಷ ಕಳೆದರೂ ದೇಶದಲ್ಲಾಗುತ್ತಿರುವ ಮಹಿಳೆಯರ ಮತ್ತು ದಲಿತರ ಮೇಲಿನ ದೌರ್ಜನ್ಯದ ಪ್ರತೀಕವಾಗಿ ಮತ್ತು ಸಂವಿಧಾನದ ಪಾಲನೆಗಾಗಿ ಆಯ್ಕೆಯಾದ ಶಾಸಕರೇ ತನ್ನ ಲಜ್ಜೆಗೆಟ್ಟ ಜಾತಿವಾದಿ, ಮನುವಾದಿ ಪಾಲಕರಾಗಿ ಸಂವಿಧಾನ ವಿರೋಧಿಯಾಗಿ ರಾಜ್ಯವೇ ನಾಚಿಕೆ ಪಡುವಂತೆ ನಡೆದುಕೊಂಡ ಬಿಜೆಪಿ ಶಾಸಕ ಮುನಿರತ್ನರ ನೀಚ ಬುದ್ಧಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರು ಅವರ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್., ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಟಿ.ಹೊನ್ನಯ್ಯ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ. ಬಳ್ಳಾಲ್ ಬಾಗ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷರಾದ ಜಯಕುಮಾರ್, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಗಣೇಶ್ ಪ್ರಸಾದ್, ಕಾಂಗ್ರೆಸ್ ನಾಯಕರಾದ ಪ್ರಕಾಶ್ ಕೋಡಿಕಲ್, ಇಂದಿರಾ ನಾಗೇಶ್, ಗುರುಪ್ರಸಾದ್ ಮೂಳೂರು, ಅಭಿಷೇಕ್, ಬಾಬು ಅಳಿಯೂರು ಮತ್ತು ಇತರರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು