6:35 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹ

24/09/2024, 19:40

ಮಂಗಳೂರು(reporterkarnataka.com):ಜಾತಿವಾದಿ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದೆ.
ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ ಮುನಿರತ್ನ, ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ, ರಾಜ್ಯದ ಅಪಾರ ದಲಿತರ ಮತ್ತು ಮಹಿಳೆಯರ ಮನಸ್ಸಿಗೆ ಅತೀವ ನೋವು ಉಂಟಾಗಿದ್ದು, ದೇಶ ಸ್ವಾತಂತ್ರ್ಯ ಕಂಡು 75 ವರ್ಷ ಕಳೆದರೂ ದೇಶದಲ್ಲಾಗುತ್ತಿರುವ ಮಹಿಳೆಯರ ಮತ್ತು ದಲಿತರ ಮೇಲಿನ ದೌರ್ಜನ್ಯದ ಪ್ರತೀಕವಾಗಿ ಮತ್ತು ಸಂವಿಧಾನದ ಪಾಲನೆಗಾಗಿ ಆಯ್ಕೆಯಾದ ಶಾಸಕರೇ ತನ್ನ ಲಜ್ಜೆಗೆಟ್ಟ ಜಾತಿವಾದಿ, ಮನುವಾದಿ ಪಾಲಕರಾಗಿ ಸಂವಿಧಾನ ವಿರೋಧಿಯಾಗಿ ರಾಜ್ಯವೇ ನಾಚಿಕೆ ಪಡುವಂತೆ ನಡೆದುಕೊಂಡ ಬಿಜೆಪಿ ಶಾಸಕ ಮುನಿರತ್ನರ ನೀಚ ಬುದ್ಧಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರು ಅವರ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್., ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಟಿ.ಹೊನ್ನಯ್ಯ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ. ಬಳ್ಳಾಲ್ ಬಾಗ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷರಾದ ಜಯಕುಮಾರ್, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಗಣೇಶ್ ಪ್ರಸಾದ್, ಕಾಂಗ್ರೆಸ್ ನಾಯಕರಾದ ಪ್ರಕಾಶ್ ಕೋಡಿಕಲ್, ಇಂದಿರಾ ನಾಗೇಶ್, ಗುರುಪ್ರಸಾದ್ ಮೂಳೂರು, ಅಭಿಷೇಕ್, ಬಾಬು ಅಳಿಯೂರು ಮತ್ತು ಇತರರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು