3:46 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು