3:57 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು