8:35 AM Sunday7 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು